ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!!

ಶ್ರೀನಗರ: 

      ನವಕಾಡಲ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

     ಜಮ್ಮು ಮತ್ತು ಕಾಶ್ಮೀರನ ಶ್ರೀನಗರ ವ್ಯಾಪ್ತಿಯ ನವಾ ಕಡಲ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಮುಂಜಾನೆ 2 ಗಂಟೆ ಸುಮಾರಿಗೆ ಪ್ರಾರಂಭವಾದ ಗುಂಡಿನ ದಾಳಿ ಸುಮಾರು ಐದು ಗಂಟೆಗಳ ಕಾಲ ನಡೆದಿದೆ. ಜಮ್ಮು ಕಾಶ್ಮೀರ ರಾಜ್ಯ ಪೊಲೀಸ್ ಮತ್ತು ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್ ನ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಂಭಿಸಿ ಉಗ್ರರನ್ನು ಸದೆ ಬಡೆದಿದ್ದಾರೆ.

      ಘಟನೆ ನಡೆದ ಸ್ಥಳದಲ್ಲಿ ಎರಡು ಎಕೆ 47 ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಈ ಕಾರ್ಯಾಚರಣೆಯ ಸಮಯದಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿಗಳು ಸಹ ಗಾಯಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap