ಸಿಎಂ ಯೋಗಿ, ಮಾಯಾವತಿ ಚುನಾವಣಾ ಪ್ರಚಾರಕ್ಕೆ ನಿಷೇಧ!!

ನವದೆಹಲಿ:

       ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಬಿಎಸ್‍ಪಿ ನಾಯಕಿ ಮಯಾವತಿ ಅವರಿಗೆ ಚುನಾವಣಾ ಆಯೋಗವು ಪ್ರಚಾರದಿಂದ ನಿಷೇಧ ಹೇರಿದೆ.

      ಸಿಎಂ ಯೋಗಿ ಹಾಗೂ ಮಾಯಾವತಿ ತಮ್ಮ ಭಾಷಣಗಳಲ್ಲಿ ಆಕ್ರಮಣಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದೇ ಈ ನಿಷೇಧಕ್ಕೆ ಕಾರಣ ಎನ್ನಲಾಗಿದೆ.

      ಆಯೋಗ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದು, ಯೋಗಿ ಆದಿತ್ಯನಾಥ್ ಅವರಿಗೆ 72 ಗಂಟೆ ಮತ್ತು ಮಯಾವತಿ ಅವರಿಗೆ 48 ಗಂಟೆಗಳ ಕಾಲ ಸಮಾವೇಶ ಹಾಗೂ ರೋಡ್ ಶೋ ನಡೆಸದಂತೆ ನಿಷೇಧ ಹೇರಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಈ ನಿಷೇಧ ಜಾರಿಗೆ ಬರಲಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link