
ಹೀಗಾಗಿ ಮಹಿಳೆಯನ್ನು ಕುಮುಟಾ ಆಸ್ಪತ್ರೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜ್ವರ ಉಲ್ಭಣಗೊಂಡಿರುವ ಕಾರಣ ವೈದ್ಯರು ಚಿಕಿತ್ಸೆ ನೀಡುತ್ತಿದ್ಧಾರೆ ಎಂದು ತಿಳಿದು ಬಂದಿದೆ. ಮಹಿಳೆಯ ವಿವರ ನೀಡಲು ಆಸ್ಪತ್ರೆ ಮೂಲಗಳು ನಿರಾಕರಿಸಿವೆ ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ ಒಟ್ಟು 152 ಜನರು ಈ ತನಕ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದ ಮಂಗನ ಕಾಯಿಲೆ ಕಾಫಿನಾಡು ಚಿಕ್ಕಮಗಳೂರಿಗೂ ಹರಡಿರುವ ಅನುಮಾನ ವ್ಯಕ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
