ಶ್ರೀನಗರ:
ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಹೊಂಚು ಹಾಕುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾಪಡೆ ಹೊಡೆದುರುಳಿಸಿದೆ.
ಇಂದು ಮುಂಜಾನೆ, ಕುಪ್ವಾರಾ ಜಿಲ್ಲೆಯ ನೌಗಮ್ ಸೆಕ್ಟರ್ನಲ್ಲಿ ಉಗ್ರರು ಒಳ ನುಸುಳಿದ್ದು, ಅನುಮಾನಾಸ್ಪದ ಓಡಾಟಗಳು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ತಕ್ಷಣವೇ ಎನ್ಕೌಂಟರ್ ನಡೆಸಿ, ಇಬ್ಬರನ್ನು ಹತ್ಯೆ ಮಾಡಿದೆ.
ಉಗ್ರರ ಬಳಿಯಿದ್ದ ಎರಡು ಎಕೆ -47 ರೈಫಲ್ಗಳು, ಮದ್ದು ಗುಂಡುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/Army-encounter.jpg)