ಕನ್ನಡಿಗರಿಗೆ ಉದ್ಯೋಗಾವಕಾಶ ; ಎಚ್‌ಡಿಕೆ

ಬೆಂಗಳೂರು :

ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಎಂಬ ಟ್ವಿಟರ್‌ ಅಭಿಯಾನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ. ಶನಿವಾರ ಈ ವಿಚಾರದ ಬಗ್ಗೆ ಹಲವಾರು ಜನರು ಟ್ವೀಟ್‌ಗಳನ್ನು ಮಾಡಿದ್ದಾರೆ. #KarnatakaJobsForKannadigas ಎಂಬ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟರ್‌ನಲ್ಲಿ ಶನಿವಾರ ದೊಡ್ಡ ಅಭಿಯಾನವನ್ನು ನಡೆಸಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಸಹ ಈ ಕುರಿತು ಟ್ವೀಟ್ ಮಾಡಿ ತಮ್ಮ ಪ್ರತಿಕ್ರಿಯೆ ನೀಡಿದರು.

  ಸಾಮಾಜಿಕ ಜಾಲತಾಣದಲ್ಲಿ ನಮ್ಮ ರಾಜ್ಯದ ಯುವ ಜನತೆ ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ದಕ್ಕಬೇಕು ಎಂದು ಹೋರಾಟ ನೆಡೆಸುತ್ತಿರುವುದನ್ನು ಗಮನಿಸಿದ್ದೇನೆ. ಕನ್ನಡಿಗರ ಹಕ್ಕೊತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link