ಮುಂಬೈ, :
ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈಗೆ ಬರಬೇಕಾಗಿದ್ದ 17 ವಿಮಾನಗಳ ತನ್ನ ದಿಕ್ಕು ಬದಲಿಸಿದೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಮುಂಬೈ ಸುತ್ತಮುತ್ತಲು ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಹಲವು ಮನೆಗಳಿಗೆ ನೀರು ನುಗ್ಗಿದೆ, ರಸ್ತೆಯೆಲ್ಲೆಲ್ಲಾ ನೀರು ತುಂಬಿಕೊಂಡು ನದಿಯಂತಾಗಿದೆ. ಇನ್ನೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಾಗೆಯೇ ವಿಮಾನಗಳು ಕೂಡ ತಮ್ಮ ಮಾರ್ಗವನ್ನು ಬದಲಿಸುವಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ