ತುಮಕೂರು:
ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗ ಕರ್ನಾಟಕ ಕನ್ನಡ ಸಂಸ್ಕøತಿ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಚಲನಚಿತ್ರ ನಟ ಪುನೀತ್ ರಾಜ್ಕುಮಾರ್ ಅವರ ಪುಣ್ಯಸ್ಮರಣೆ ಆಚರಿಸಲಾಯಿತು.
ಸ್ಪೂರ್ತಿ ಡೆವಲೆಪರ್ಸ್ನ ಎಸ್.ಪಿ.ಚಿದಾನಂದ್ ಅವರು ಉದ್ಘಾಟಿಸಿದರು. ರಾಜ್ಯ ರೆಡ್ ಕ್ರಾಸ್ ಸಭಾಪತಿ ಎಸ್.ನಾಗಣ್ಣ, ಸಾಹಿತಿ ಡಾ.ಕವಿತಾಕೃಷ್ಣ, ಧನಿಯಾಕುಮಾರ್, ಕನ್ನಡ ಸಂಸ್ಕøತಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹೊಸಕೋಟೆ ನಟರಾಜ್, ಮಲ್ಲಸಂದ್ರ ಶಿವಣ್ಣ, ಟಿ.ಆರ್.ಸದಾಶಿವಯ್ಯ, ಬನಶಂಕರಿ ಬಾಬು, ಭಾವಸಾರ ಕ್ಷತ್ರಿಯ ಬ್ರಿಗೇಡ್ನ ಸೌಮ್ಯಶ್ರೀ, ನಾಗೇಶ್, ರಾಘವೇಂದ್ರ ಉಪಸ್ಥಿತರಿದ್ದರು. ಇದೇ ವೇಳೆ ಅಂಗವಿಕಲರಿಗೆ ತ್ರಿಚಕ್ರ ಸೈಕಲ್ನ್ನು ವಿತರಿಸಲಾಯಿತು, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
