ಬೆಂಗಳೂರು:
ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಗೋಲಿಬಾರ್ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಅವರಿಬ್ಬರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳು ಮಂಗಳೂರು ಜಿಲ್ಲಾಧಿಕಾರಿಗೆ ತಕ್ಷಣ ಹಣ ಪರಿಹಾರದ ಹಣ ನೀಡುವಂತೆ ಸೂಚನೆ ನೀಡಿದ್ದಾರೆ . ಅಲ್ಲದೆ, ಗಲಭೆ ತನಿಖೆಯ ಬಗ್ಗೆ ನಂತರ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗದೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿಗೆ ತೆರಳಿದ್ದ ಸಿಎಂ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
