ಬೆಂಗಳೂರು:
ಉಡುಪಿಯ ಅಷ್ಟಮಠಗಳ ಪೈಕಿ ಅತ್ಯಂತ ಪ್ರಗತಿಪರವಾಗಿದ್ದವರು ವಿಶ್ವೇಶ ತೀರ್ಥ ಸ್ವಾಮೀಜಿ. ಮಹಾನುಭಾವ ಶ್ರೀಕೃಷ್ಣನಲ್ಲಿಯೇ ಅವರು ಸೇರಿಕೊಂಡಿದ್ದಾರೆ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಮರಿಸಿಕೊಂಡರು.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಕೃಷ್ಣೈಕ್ಯರಾದರು ಎಂಬ ವಿಷಯ ತೀವ್ರ ಆಘಾತವನ್ನುಂಟುಮಾಡಿದೆ. ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿಯಾಗಿದ್ದ ಶ್ರೀಗಳ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿ.
ಶ್ರೀಗಳ ಭಕ್ತವೃಂದಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/oo9qDCDqdZ— H D Devegowda (@H_D_Devegowda) December 29, 2019
‘ಸಮಾಜದಲ್ಲಿ ಅನೇಕ ಪ್ರಗತಿಶೀಲ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಹರಿಜನರ ಅಭಿವೃದ್ಧಿಗಾಗಿ ದುಡಿಯುತ್ತಿದ್ದರು. ಮುಸ್ಲಿಮರಿಗಾಗಿ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು. ಇಂಥ ಕೆಲಸಗಳನ್ನು ನಾವು ಮರೆಯಲು ಆಗುವುದಿಲ್ಲ’ ಎಂದು ದೇವೇಗೌಡರು ನುಡಿದರು. ‘ಉಡುಪಿಯಲ್ಲಿ ಆರು ಪರ್ಯಾಯ ಮಾಡಿದ ಮಹಾನುಭಾವರು ಅವರು.
ನನ್ನ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು’ ಎಂದು ನೆನಪಿಸಿಕೊಂಡರು.ಶ್ರೀಗಳ ನಿಧನ ಹಿನ್ನೆಲೆಯಲ್ಲಿ ಟ್ವೀಟ್ ಕೂಡ ಮಾಡಿರುವ ದೇವೇಗೌಡರು, ‘ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಕೃಷ್ಣೈಕ್ಯರಾದರು ಎಂಬ ವಿಷಯ ತೀವ್ರ ಆಘಾತವನ್ನುಂಟುಮಾಡಿದೆ. ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿಯಾಗಿದ್ದ ಶ್ರೀಗಳ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿ. ಶ್ರೀಗಳ ಭಕ್ತವೃಂದಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,’ ಎಂದು ಪ್ರಾರ್ಥಿಸುತ್ತೇನೆ ಎಂದು ನುಡಿದ್ದಿದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
