ಶಿರಡಿ :
ಸಾಯಿಬಾಬಾ ಜನ್ಮಸ್ಥಳದ ಬಗ್ಗೆ ವಿವಾದ ಭುಗಿಲೆದ್ದಿರುವ ಹಿನ್ನೆಲೆ, ನಾಳೆಯಿಂದ ಅನಿರ್ದಿಷ್ಟಾವಧಿ ಸಮಯದವರೆಗೆ ಶಿರಡಿ ದೇವಾಲಯವನ್ನು ಮುಚ್ಚಲು ನಿರ್ಧರಿಸಲಾಗಿದೆ. ಸಾಯಿಬಾಬಾರ ಜನ್ಮ ಸ್ಥಳ ಪರ್ಭಾನಿಯ ಪತ್ರಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸಿಎಂ ಹೇಳಿಕೆ ವಿರುದ್ಧ ಸಿಡಿದೆದ್ದಿರುವ ಸಾಯಿಬಾಬಾ ಸಮಾಧಿ ಆಡಳಿತ ಮಂಡಳಿ ನಾಳೆಯಿಂದ ದೇವಾಲಯ ಮುಚ್ಚಲು ನಿರ್ಧರಿಸಿದೆ.
ಸಾಯಿಬಾಬಾ ಅವರ ಜನ್ಮಸ್ಥಳದ ಬಗ್ಗೆ ವದಂತಿ ಹಬ್ಬಿದ ಹಿನ್ನಲೆಯಲ್ಲಿ ಶಿರಡಿ ಮಂದಿರವನ್ನು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಚ್ಚುವುದಾಗಿ ನಾವು ಹೇಳಿದ್ದೇವೆ ಎಂದು ಸಾಯಿಬಾಬಾ ಸಂಸ್ಥಾನ ಸದಸ್ಯರು ಹೇಳಿದ್ದಾರೆ. ಭಕ್ತರಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದೂ ಇದೇ ವೇಳೆ ಸ್ಪಷ್ಟನೆ ಸಹ ನೀಡಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/desktop-wallpaper-hd-sai-baba-unique-sai-baba-hd-and-d-wallpapers-android-apps-on-google-play-of-desktop-wallpaper-hd-sai-baba-PIC-WSW3093699.jpg)