ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌ ಅಪಘಾತ ; ಒಬ್ಬ ವಿದ್ಯಾರ್ಥಿ ಸಾವು,12 ಜನರು ಗಂಭೀರ

ಶಿವಮೊಗ್ಗ :

   ಆಂಧ್ರಪ್ರದೇಶದಿಂದ ಪ್ರವಾಸಕ್ಕೆ ಆಗಮಿಸಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬ ವಿದ್ಯಾರ್ಥಿ‌ ಮೃತಪಟ್ಟ ಘಟನೆ ಗೇರುಸೊಪ್ಪ ಸಮೀಪ ನಡೆದಿದೆ.

  ಉತ್ತರ ಕನ್ನಡ ಜಿಲ್ಲೆ ಗೇರುಸೊಪ್ಪ ಬಳಿ ಶುಕ್ರವಾರ ರಾತ್ರಿ ಅಪಘಾತವಾಗಿದ್ದು, ಭಾಷಾ ಫಕ್ರುದ್ದಿನ್ [14] ಎಂಬ ವಿದ್ಯಾರ್ಥಿ ಸ್ಥಳದ್ಲೇ ಸಾವಿಗೀಡಾಗಿದ್ದು, 12 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಆಂಧ್ರಪ್ರದೇಶದ ಕದ್ರಿ ಅನಂತಪುರ ಜಿಲ್ಲೆಯ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಇವರು  ಸಿಗಂದೂರು, ಜೋಗ, ಮುರ್ಡೇಶ್ವರ ಸೇರಿದಂತೆ ವಿವಿಧ ಪ್ರವಾಸಿ ತಾಣ ವೀಕ್ಷಿಸಲು ಬಸ್ ಮೂಲಕ ಆಗಮಿಸಿದ್ದರು.

   ಒಟ್ಟು 44ವಿದ್ಯಾರ್ಥಿಗಳು, 9 ಶಿಕ್ಷಕರು 4 ಅಡುಗೆ ಸಿಬ್ಬಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 12 ಮಂದಿಯನ್ನು ಮಣೆಪಾಲ ಮತ್ತು ಉಡುಪಿ ಸೇರಿದಂತೆ ವಿವಿಧ ಖಾಸಗಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಬಹುತೇಕರು ಆಂಧ್ರ ಹಾಗೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap