ಕಾರು-ಬಸ್​ ಮುಖಾಮುಖಿ ಡಿಕ್ಕಿ; ಮೂರು ಮಂದಿ ಸಜೀವ ದಹನ ; ತುಮಕೂರು

ತುಮಕೂರು: 

   ಖಾಸಗಿ ಬಸ್ ಹಾಗು ಓಮ್ನಿ ವ್ಯಾನ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಮೂವರು ಸಜೀವ ದಹನಗೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ.

   ದೊಡ್ಡಗುಣಿ ಕೆರೆ ಏರಿ ಮೇಲೆ ಬಸ್​ ಮತ್ತು ಕಾರು ಮುಖಾಮುಖಿಯಾಗಿವೆ. ಡಿಕ್ಕಿಯಾದ  ರಭಸಕ್ಕೆ ಬಸ್​ ಮತ್ತು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಮೂರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಬಸ್​ ಮತ್ತು ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿವೆ.

   ಮೃತರನ್ನು ವಸಂತ್​ಕುಮಾರ್​​​​(45), ನರಸಮ್ಮ(60), ರಾಮಯ್ಯ(55) ಎಂದು ಗುರುತಿಸಲಾಗಿದೆ. ನಾಲ್ವರಿಗೆ ಗಂಭೀರ  ಗಾಯವಾಗಿದ್ದು, ತುಮಕೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಬಸ್ ಬೆಂಗಳೂರಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್​​ ಬಸ್​​ನಲ್ಲಿದ್ದ 40 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಬ್ಬಿ ಸರ್ಕಲ್ ಇನ್ಸ್​​​ಪೆಕ್ಟರ್​​ ದೀಪಕ್ ಹೆಗ್ಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap