ಬೆಂಗಳೂರು :
ಹೆಣ್ಣು ಮೊಮ್ಮಗಳು ಹುಟ್ಟಿದಳು ಎನ್ನುವ ಕಾರಣಕ್ಕೆ ಅಜ್ಜಿಯೊಬ್ಬರು ರಾಕ್ಷಸಿಯಾಗಿದ್ದಾರೆ . ತನ್ನ ಮಗನಿಗೆ ಹೆಣ್ಣು ಹುಟ್ಟಿದೆ ಅನ್ನೋ ಕಾರಣಕ್ಕೆ ಅಜ್ಜಿ, 9 ದಿನದ ಹಸುಳೆಯನ್ನು ಕೊಂದಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ. ಈ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಬೆಳಕಿಗೆ ಬಂದಿದೆ.
ತಮಿಳ್ ಸೆಲ್ವಿ ಮಗುವನ್ನು ಕಳೆದುಕೊಂಡ ತಾಯಿ ತಮಿಳ್ ಸೆಲ್ವಿ, ತನ್ನ ಅತ್ತೆ ಪರಮೇಶ್ವರಿ ವಿರುದ್ಧ ಸೋಲದೇವನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.’ ಶನಿವಾರ ರಾತ್ರಿ ಮಗುವಿಗೆ ಹಾಲುಣಿಸಿ ಆಟವಾಡಿಸುತ್ತಿದ್ದೆ. ಬಳಿಕ ಮಗುವನ್ನು ಅತ್ತೆ ಕೈಗೆ ಕೊಟ್ಟು ಅಡುಗೆ ಮನೆಗೆ ಹೋಗಿದ್ದೆ. ಬಂದು ನೋಡುವಷ್ಟರಲ್ಲಿ ಅತ್ತೆ ಕೈಯಲ್ಲಿ ಮಗು ಇರಲಿಲ್ಲ. ಮಗುವನ್ನ ಯಾರೋ ತೆಗೆದುಕೊಂಡು ಹೋಗಿದ್ದಾರೆ ಎಂದು ಅತ್ತೆ ಹೇಳಿದ್ದಳು. ಅಕ್ಕಪಕ್ಕದ ಮನೆ ಹಾಗೂ ಮನೆಯ ಸುತ್ತ ಹುಡುಕಾಟ ನಡೆಸಿದೆವು. ಈ ವೇಳೆ ಮನೆ ಹಿಂಭಾಗದಲ್ಲಿ ಮಗು ಬಿದ್ದಿತ್ತು.’ ಎಂದು ಸೆಲ್ವಿ ದೂರಿನಲ್ಲಿ ತಿಳಿಸಿದ್ದಾರೆ.
ಮಗುವಿನ ಕತ್ತಿನ ಬಳಿ ಗಾಯದ ಗುರುತು ಪತ್ತೆಯಾಗಿದೆ. ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರೋ ಶಂಕೆ ಇದೆ. ಮಾರ್ಷಲ್ ಮತ್ತು ತಮಿಳುಸೆಲ್ವಿಗೆ 3 ವರ್ಷಗಳ ಹಿಂದೆ ವಿವಾಹವಾಗಿದೆ. ಈಗ ಕೊಲೆಯಾಗಿರುವ ಹೆಣ್ಣು ಶಿಶುವೇ ಮೊದಲ ಮಗು. ”ಅವಧಿಪೂರ್ವ ಹೆಣ್ಣು ಮಗು ಜನಿಸಿದ್ದಕ್ಕೆ ಅತ್ತೆ ಸದಾ ಬೈಯ್ಯುತ್ತಿದ್ದರು” ಎಂದು ತಮಿಳುಸೆಲ್ವಿ ಆರೋಪಿಸಿದ್ದಾರೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಣ್ಣು ಮಗು ಜನಿಸಿದೆ ಎನ್ನುವ ಕಾರಣಕ್ಕೆ ಅಜ್ಜಿ ಮಗುವನ್ನ ಉಸಿರುಗಟ್ಟಿಸಿ ಸಾಯಿಸಿರುವ ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ