ಮಂಗಳೂರು:
ಸ್ಕೂಟರ್ವೊಂದಕ್ಕೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಗರದ ಹೊರವಲಯದ ಅಡ್ಯಾರ್ನಲ್ಲಿ ನಡೆದಿದೆ. ಅಡ್ಡೂರು ನಿವಾಸಿ ಹಮೀದ್ (50) ಮೃತ ಸ್ಕೂಟರ್ ಸವಾರ ಎಂದು ಗುರುತಿಸಲಾಗಿದೆ.
ಹಮೀದ್ ಅವರು ಅರ್ಕುಳದ ಹಾಲ್ವೊಂದರಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ವಾಪಸಾಗುತ್ತಿದ್ದರು. ಬೆಳಗ್ಗೆ ಸುಮಾರು 11:45ಕ್ಕೆ ಸ್ಕೂಟರ್ ಅಡ್ಯಾರ್ ಸಮೀಪಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮುಂದೆ ಹೋಗುತ್ತಿದ್ದ ಆಯಕ್ಟೀವಾ ಸ್ಕೂಟರ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ನೊಂದಿಗೆ ಬಿದ್ದ ಸವಾರ ಹಮೀದ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಈ ಕುರಿತು ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಪ್ರಕರಣ ದಾಖಲಿಸಿಕೋಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/50-year-old-Man-Dies-in-KSRTC-Bus-and-Scooter-Collision.jpg)