ಬೆಂಗಳೂರು:
ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.
ಹೃದಯಕ್ಕೆ ರಕ್ತ ಪರಿಚಲನೆ ಸರಿಯಾಗಿ ಆಗದ ಕಾರಣದಿಂದಾಗಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯಗೆ ವೈದ್ಯರಿಂದ ಆಂಜಿಯೋಪ್ಲಾಸ್ಟ್ ಮಾಡಲಾಗಿತ್ತು. ಶಸ್ತ್ರ ಚಿಕಿತ್ಸೆ ಮೂಲಕ ಹೃದಯ ಕವಾಟಗಳಿಗೆ ಸ್ಟಂಟ್ ಅಳವಡಿಸಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆಸ್ಪತ್ರೆಗೆ ರಾಜಕಾರಣಿಗಳು ಹಾಗೂ ವಿವಿಧ ಗಣ್ಯರು ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದರು.
ಇಂದು ಸಂಪೂರ್ಣ ಗುಣಮುಖರಾದ ಸಿದ್ದರಾಮಯ್ಯರನ್ನು ಆಸ್ಪತ್ರೆ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮುನ್ನ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರಿಗೆ ಧನ್ಯವಾದ ತಿಳಿಸಿದದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/karnataka-chief-minister-siddaramaiah-addresses-a-483310.gif)