ಹುಬ್ಬಳ್ಳಿ:
ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ ವರಿಷ್ಠ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಮಾರ್ಚ್ 4 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ನೂತನವಾಗಿ ಆಯ್ಕೆಯಾದ ಪಕ್ಷದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ತಿಳಿದು ಬಂದಿದೆ.
“ಕರ್ನಾಟಕದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಪ್ರಗತಿಗೆ ಸಂಬಂಧಿಸಿದಂತೆ ಸ್ಥಾಪಿತ ರಾಜಕೀಯ ಪಕ್ಷಗಳು ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿವೆ. ದೆಹಲಿಯ ಆಡಳಿತ ಮಾದರಿಯಲ್ಲಿ ಎಎಪಿ ಪರ್ಯಾಯ ವಿಚಾರಗಳನ್ನು ರೂಪಿಸಲಿದೆ ಎಂದು ಅವರು ಹೇಳಿದರು.
ಪಕ್ಷವು ಅಧಿಕಾರಕ್ಕೆ ಬಂದರೆ ಸರ್ಕಾರಿ ಸಿಬ್ಬಂದಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ತರಲಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
