ಕೇಜ್ರಿವಾಲ್‌ ಭೇಟಿಗೆ ಪತ್ನಿಗೆ ಅವಕಾಶ ನೀಡಿದ ಜೈಲು ಆಡಳಿತ….!!

ನವದೆಹಲಿ:

   ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾಗೆ ಜೈಲಿನ ಆಡಳಿತ ಅನುಮತಿ ನೀಡಿದೆ.

   ಇಂದು ಸುನೀತಾ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಲಿದ್ದು, ಅವರೊಂದಿಗೆ ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಇರುತ್ತಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ. 

    ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಜೈಲಿನ ಅಧಿಕಾರಿಗಳು ಸುನೀತಾ ಅವರಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಎಎಪಿ ಭಾನುವಾರ ಹೇಳಿತ್ತು, ಈ ಆರೋಪವನ್ನು ಜೈಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap