ಕುತೂಹಲ ಕೆರಳಿಸಿದ ಸಿದ್ದು ಖರ್ಗೆ ಮೀಟಿಂಗ್‌

ಬೆಂಗಳೂರು

   ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಮತ್ತವರ ನಿರೀಕ್ಷೆಗಳು ಹೆಚ್ಚುತ್ತ ಆಹೊಗುತ್ತಿದೆ. ಪಕ್ಷಗಳು ಟಿಕೆಟ್ ಘೋಷಣೆ ಮಾಡದ ಹಿನ್ನೆಲೆ ಹಿರಿಯ ನಾಯಕರ ಸಭೆಗಳು, ಭೇಟಿಗಳಿಗೆ ವಿಶೇಷ ಅರ್ಥ ಹುಟ್ಟು ಹಾಕುತ್ತಿವೆ . ಇಂತಹದ್ದೆ ಮೀಟಿಂಗ್‌  ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯೂ ಕುತೂಹಲ ಮೂಡಿಸಿದೆ.

    ಕಾಂಗ್ರೆಸ್ ಪಕ್ಷದ ಮಹಾಧೀವೇಶನದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ನಾಯಕರು ಸುಮಾರು ನಲವತ್ತೈದು ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದ್ದಾರೆ ಎನ್ನಲಾಗಿದ್ದು, ಟಿಕೆಟ್ ಹಂಚಿಕೆ, ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿಬಹುದು ಎಂದು ಮೂಲಗಳು ತಿಳಿಸಿವೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಸ್ತವ್ಯವಿದ್ದ ಹೋಟೆಲ್‌ ಕೊಠಡಿಯ ಎದುರಿನ ಕೊಠಡಿಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ವಾಸ್ತವ್ಯವಿದ್ದರು. ಶನಿವಾರ ರಾತ್ರಿ ಮಲ್ಲಿಕಾರ್ಜುನ ಖರ್ಗೆಯವರ ಕೊಠಡಿಗೆ ತೆರಳಿದ ಸಿದ್ದರಾಮಯ್ಯ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link