ಚಿತ್ರದುರ್ಗ :
ಅರಣ್ಯ ಇಲಾಖೆಯ ಅಧಿಕಾರಿಗಳ ಎದುರೇ ಚಿರತೆಯನ್ನು ಕೊಚ್ಚಿ ಕೊಚ್ಚಿ ಕೊಂದ ಘಟನೆ ಹೊಸದುರ್ಗ ತಾಲೂಕಿನ ಕುರುಬರ ಹಳ್ಳಿ ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗ್ರಾಮಕ್ಕೆ ನುಗ್ಗಿದ ಚಿರತೆ ಮೂರು ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿತ್ತು. ಬಳಿಕ ಮರವೊಂದನ್ನು ಏರಿ ಕುಳಿತಿದ್ದ ಚಿರತೆಯ ಮೇಲೆ ನೂರಾರು ಜನರು ಕಲ್ಲು ತೂರಾಟ ನಡೆಸಿದ್ದಾರೆ. ಮರದಿಂದ ಕೆಳಕ್ಕೆ ಬಿದ್ದ ಚಿರತೆ ಮತ್ತೆ ದಾಳಿ ನಡೆಸಲು ಮುಂದಾದಾಗ ದೊಣ್ಣೆಯಿಂದ ಹೊಡೆದು ನೆಲಕ್ಕುರುಳಿಸಲಾಗಿದೆ.
ಇನ್ನು ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ನೂರಾರು ಜನರ ಗುಂಪಿನಿಂದ ಚಿರತೆಯ ಹತ್ಯೆಯನ್ನು ತಡೆಯುವಲ್ಲಿ ವಿಫಲರಾದರು ಎನ್ನಲಾಗಿದೆ.
ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅರಣ್ಯ ಇಲಾಖೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಅರಣ್ಯಾಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ