ಕೊರಟಗೆರೆ : ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಕೊರಟಗೆರೆ : 

      ಮರಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯುವಕನೋರ್ವ ಜೀವನದಲ್ಲಿ ಜುಗುಪ್ಸೆಗೊಂಡು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

       ತಾಲ್ಲೂಕಿನ ಎಲೆರಾಂಪುರ ಕೆರೆಯಲ್ಲಿ ಈ ದುರ್ಘಟನೆ ಜರುಗಿದ್ದು, ಇರಕಸಂದ್ರ ಕಾಲನಿ ಬಳಿಯ ಸಂಕೇನಹಳ್ಳಿ ಗ್ರಾಮದ ಲೇಟ್ ಗಂಗಹನುಮಪ್ಪನ ಮಗ ಕೆಂಪರಾಜು (28) ಸಾವಿಗೀಡಾದ ದುರ್ದೈವಿ ಎನ್ನಲಾಗಿದೆ.

      ಮೃತ ಕೆಂಪರಾಜು ಮೂಲತಃ ಡಾಬಸ್‍ಪೇಟೆ-ತ್ಯಾಮಗೊಂಡ್ಲು ಬಳಿಯ ಓಬಳಾಪುರ ಗ್ರಾಮದವರಾಗಿದ್ದು, ಇತ್ತೀಚೆಗೆ ಕೆಲವು ವರ್ಷಗಳಿಂದ ಸಂಕೇನಹಳ್ಳಿ ಗ್ರಾಮದಲ್ಲಿ ವಾಸವಿದ್ದರು ಎನ್ನಲಾಗಿದೆ.

      ಮೃತ ಕೆಂಪರಾಜು ಮುಂಗೋಪಿಯಾಗಿದ್ದು, ಮಾನಸಿಕ ಅಸ್ವಸ್ಥ ರೀತಿಯಲ್ಲಿ ವರ್ತಿಸುತ್ತಿದ್ದರು ಎನ್ನಲಾಗುತ್ತಿದೆ. ಈತ ಮಾನಸಿಕ ಸಮತೋಲನವಿಲ್ಲದೆ ಮಾನಸಿಕವಾಗಿ ನೊಂದು ದುಡುಕಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

      ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಕೋಳಾಲ ಪಿಎಸ್‍ಐ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link