ಕೊರಟಗೆರೆ :
ಆಗ್ನೇಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಸಂಘಟನೆ ಬಲಗೊಳಿಸಲು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 3 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಬೆಂಗಳೂರು ನಗರದ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ವೈ.ಎನ್.ಎ ಮತ್ತು ಚಿದಾನಂದ ಎಂ.ಗೌಡ ಅಭಿಮಾನಿ ಬಳಗದ ಅಧ್ಯಕ್ಷ ನಿವೃತ್ತ ಹಿರಿಯ ಶಿಕ್ಷಕ ಬಿ.ಹನುಮಂತರೆಡ್ಡಿ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಆಗ್ನೇಯ ಕ್ಷೇತ್ರಕ್ಕೆ ಸೇರಿರುವ 5 ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತಾಗಲು ಪ್ರಬಲ ನಾಯಕತ್ವದ ಅಗತ್ಯವಿದೆ. ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷಕ್ಕೆ ಸದಾ ನಿಷ್ಠೆ ಹೊಂದಿರುವ ಎಂಜನಿಯರ್ ಸ್ನಾತಕೋತ್ತರ ಪದವೀಧರರೂ ಆದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಅತಿ ಹೆಚು ಮತಗಳ ಅಂತರದಿಂದ ಆಯ್ಕೆಯಾಗಿದ್ದ ಶಿಕ್ಷಕರ ಹಾಗೂ ಪದವೀಧರ ಮತದಾರರ ಪ್ರೀತಿಗೆ ಪಾತ್ರರಾಗಿದ್ದಾರೆ. ಬೆಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ ವಿಧಾನಪರಿಷತ್ನಲ್ಲಿ ಪಕ್ಷದ ಉಪನಾಯಕರಾಗಿ, ಸದನದ ಅರ್ಜಿ ಸಮಿತಿ, ಪರಿಶಿಷ್ಟರ, ಹಿಂದುಳಿದ ವರ್ಗಗಳ ಸಮಿತಿಯ ಸದಸ್ಯರಾಗಿದ್ದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಹೀಗೆ ಹಲವಾರು ಸಮಿತಿಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಹೊಂದಿದ್ದಾರೆ.
ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದಂತೆ ಸದನ ಸಮಿತಿ ಅಧ್ಯಕ್ಷರಾಗಿ, ಪ್ರ್ರಿವಿಲೇಜ್ ಕಮಿಟಿ ಅಧ್ಯಕ್ಷರಾಗಿ ಅನುಭವ ಹೊಂದಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪಕ್ಷವನ್ನು ಬಲಗೊಳಿಸುವ ಶಕ್ತಿ, ಜಾಣ್ಮೆ ಹೊಂದಿರುವಂತಹ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭಧಲ್ಲಿ ಕೊರಟಗೆರೆ ತಾಲ್ಲೂಕು ಬಿಜೆಪಿ ಪಕ್ಷದ ತಾಲ್ಲೂಕು ಘಟಕದ ಪದಾಧಿಕಾರಿಗಳು, ಆಗ್ನೇಯ ಶಿಕ್ಷಕರ ಕ್ಷೇತ್ರದ ವೈ.ಎ.ಎನ್. ಮತ್ತು ಚಿದಾನಂದಗೌಡ ಅಭಿಮಾನಿ ಬಳಗದ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
