ರಸ್ತೆಗಿಳಿದ ಹೊಸ KSRTC ಅಂಬಾರಿ ಉತ್ಸವ್‌ ಬಸ್ಸುಗಳು….!

ಬೆಂಗಳೂರು

     ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್​ಗಳು  ಸೇರ್ಪಡೆಗೊಂಡಿದ್ದು, ಇಂದಿನಿಂದಲೇ (ಡಿ.24) ರಸ್ತೆಗೆ ಇಳಿದಿವೆ. 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

   ಇದೇ ವೇಳೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಎರಡು ತಿಂಗಳ ಮುಂಚೆ ವೋಲ್ವೋ 20 ಬಸ್​ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್​ ಬಸ್​ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ ಎಂದು ತಿಳಿಸಿದರು. 

   9 ಸಾವಿರ ನೌಕರರ ನೇಮಕಾತಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. ನಲ್ಕೂ ನಿಗಮಗಳಿಗೆ ನೇಮಕ ಆದವರಿಗೆ ನೇಮಕಾತಿ ಪತ್ರ ಕೊಡುತ್ತಿದ್ದೇವೆ. ಎಲ್ಲ ನೇಮಕಾತಿಗಳು ಪಾರದರ್ಶಕವಾಗಿ ಆಗುತ್ತಿವೆ. 750 ವಿದ್ಯುತ್​ ಚಾಲಿತ ಬಸ್​ಗಳಿಗೆ ಕ್ಯಾಬಿನೆಟ್ ಅನುಮತಿ ನೀಡಿದೆ. ಅವು ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಓಡಾಟ ನಡೆಸಲಿವೆ. ಟೆಂಡರ್​ನಲ್ಲಿ ಭಾಗಿಯಾದ ಖಾಸಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಅದೇ ರೀತಿ ನಮಗೂ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದರೇ ಇನ್ನಷ್ಟು ಬಸ್​ಗಳನ್ನ ರಸ್ತೆಗಿಳಿಸುತ್ತೇವೆ ಎಂದರು.

ಅಂಬಾರಿ ಉತ್ಸವ ಸೀಪ್ಲರ್ ವಿಶೇಷತೆ

  • ಅಂಬಾರಿ ಉತ್ಸವ ಸೀಪ್ಲರ್ ಬಸ್​ಗಳು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತವೆ.
  • ಇದು ಶಕ್ತಿಯುತ ಹಾಲೋಜನ್ ಹೆಡ್​ಲೈಟ್‌ಗಳು ಮತ್ತು ಬೆಳಿಗನ ಸಮಯದಲ್ಲಿ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿವೆ.
  • ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎರಿಯರ್ಸ್ ಹೊಂದಿವೆ. ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್​ ಅನ್ನು ನೀಡುತ್ತದೆ.
  • ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ.
  • ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತವೆ.
  • ಬಸ್ ಮುಂಭಾಗದ ಗಾಜು 9.5% ಅಗಲವಾಗಿವೆ.
  • ಯು.ಎಸ್.ಬಿ ಮತ್ತು C-ಟೈಪ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಸಲಾಗಿದೆ.
  • ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಮಾಡಲಾಗಿದೆ.
  • ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳ ವ್ಯವಸ್ಥೆ ಮಾಡಲಾಗಿದೆ.
  • ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.
  • ರಾತ್ರಿ ವೇಳೆ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳ ಅಳವಡಿಸಲಾಗಿದೆ.
  • ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ.
  • ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.
  • ಚಾಲಕರು, ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾಗಿದೆ.

ಸದ್ಯ ಎಲ್ಲೆಲ್ಲಿ ಸಂಚಾರ

  • ಕುಂದಾಪುರ-ಬೆಂಗಳೂರು ಮಧ್ಯೆ 2 ಬಸ್​ಗಳು ಸಂಚರಿಸುತ್ತವೆ.
  • ಮಂಗಳೂರು-ಬೆಂಗಳೂರು ಮಧ್ಯೆ 2 ಬಸ್​ಗಳು
  • ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕುಂದಾಪುರ ನಡುವೆ 2 ಬಸ್​ಗಳು
  • ಬೆಂಗಳೂರು-ನೆಲ್ಲೂರು ನಡುವೆ 2 ಬಸ್​ಗಳು
  • ಬೆಂಗಳೂರು-ಹೈದಾರಬಾದ್ ನಡುವೆ 2 ಬಸ್​ಗಳು
  • ಬೆಂಗಳೂರು-ವಿಜಯವಾಡ ನಡುವೆ 4 ಬಸ್​ಗಳು
  • ಬೆಂಗಳೂರು-ಎರ್ನಾಕುಲಂ ನಡುವೆ 2 ಬಸ್​ಗಳು
  • ಬೆಂಗಳೂರು-ತ್ರಿಶೂರು ನಡುವೆ 2 ಬಸ್​ಗಳು
  • ಬೆಂಗಳೂರು-ಕಲ್ಲಿಕೋಟೆ ನಡುವೆ 2 ಬಸ್​ಗಳು ಸಂಚರಿಸಲಿವೆ.

Recent Articles

spot_img

Related Stories

Share via
Copy link