ಸುಬ್ರಹ್ಮಣ್ಯ: ‘
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯಾದ್ಯಂತ ಕೋವಿಡ್ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಎಲ್ಲಾ ಸೇವನೆಗಳನ್ನು ಇಂದು (ಬುಧವಾರ) ಮಧ್ಯರಾತ್ರಿಯಿಂದಲೇ ಸ್ಥಗಿತಗೊಳಿಸಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.
ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ವಿಶೇಷ ಉತ್ಸಾವಾದಿಗಳನ್ನು ತಡೆಹಿಡಿಯಲಾಗಿದೆ. ದೇವಸ್ಥಾನದ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತರಿಗೆ ಅಥವಾ ಸಾರ್ವಜನಿಕರಿಗೆ ಹಂಚಿಕೆ ಮಾಡದಿರಲು ಸೂಚಿಸಲಾಗಿದೆ. ಈಗಾಗಲೇ ಸೇವೆಗಳನ್ನು ಬುಕ್ ಮಾಡಿದವರಿಗೆ ಸೇವೆ ಆರಂಭವಾದ ಬಳಿಕ ಆಧ್ಯತೆ ಮೇರೆಗೆ ಸೇವಾ ಅವಕಾಶ ನೀಡಲಾಗುವುದು ಎಂದು ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸುತ್ತೋಲೆಯಲ್ಲಿ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/Kukke-subramanya.jpg)