ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ : ಕುಮಾರಸ್ವಾಮಿ

ಬೆಂಗಳೂರು:

   ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಗ್ರೇಟರ್‌ ಬೆಂಗಳೂರು ವಿಧೇಯಕ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ!!, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ.

  ಅಖಂಡ ಭಾರತವನ್ನು ಹೋಳು ಮಾಡಿತು! ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ!! ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಗ್ರೇಟರ್‌ ಬೆಂಗಳೂರು ಹೆಸರಿಗಷ್ಟೇ. ಲೂಟರ್‌ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ..

   ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ!! ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ!! ಎಂದಿದ್ದಾರೆ.

Recent Articles

spot_img

Related Stories

Share via
Copy link