ಕುಣಿಗಲ್ :
69 ಲಕ್ಷ ರೂ. ವೆಚ್ಚದಲ್ಲಿ ಹುಲಿಯೂರುದುರ್ಗ ಬೈಪಾಸ್ ರಸ್ತೆಯ ಮೂಲಕ ಕಂಪಲಾಪುರ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ ನೆರವೇರಿಸಿದರು.
ತಾಲೂಕಿನ ಹುಲಿಯೂರುದುರ್ಗ ಬೈಪಾಸ್ ಮುನೇಶ್ವರ ದೇವಸ್ಥಾನದ ಮೂಲಕ ಕಂಪಲಾಪುರ ಪರಿಶಿಷ್ಟ ಪಂಗಡದ ಕಾಲೋನಿಗೆ ಸಂಪರ್ಕ ರಸ್ತೆ ಅಭಿವೃದ್ಧಿಗೆ 69 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಹುಲಿಯೂರುದುರ್ಗ ಹೋಬಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು ಗ್ರಾಮಗಳ ರಸ್ತೆ ಕುಡಿಯುವ ನೀರು ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಹಣಕಾಸು ಬಿಡುಗಡೆ ಮಾಡುವಲ್ಲಿ ವಿಳಂಬ ದಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಅನುಮತಿಗಾಗಿ ಮುಂದಿನ ದಿನಗಳಲ್ಲಿ ರೈತರೊಂದಿಗೆ ಹೋರಾಟ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಅಲ್ಲಾಭಕ್ಷ್ ಗುತ್ತಿಗೆದಾರರಾದ ನಾಗಪ್ಪ ಪಿಡಿಒ ವಿನಾಯಕ್ ಜೂನಿಯರ್ ಇಂಜಿನಿಯರ್ ರಾಜಣ್ಣ ನಾಗೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/02/1614349271675-e1614403799786.jpg)