ಚುನಾವಣೆ ತಯಾರಿಯಲ್ಲಿದ್ದ ರೌಡಿಶೀಟರ್​ ಕುಣಿಗಲ್ ಗಿರಿ​ ಬಂಧನ!!

ಬೆಂಗಳೂರು :

      ಚುನಾವಣೆ ತಯಾರಿಯಲ್ಲಿದ್ದ ರೌಡಿಶೀಟರ್​ ಕುಣಿಗಲ್ ಗಿರಿ​ಯನ್ನು ಪೊಲೀಸರು ಬಂಧಿಸಿದ್ದಾರೆ.

      ಗ್ರಾಪಂ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಸಲು ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಕಾಮಾಕ್ಷಿಪಾಳ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಇಂದು ಗಿರೀಶ್​ನನ್ನು ವಶಕ್ಕೆ ಪಡೆದಿದ್ದಾರೆ.

      ನವೆಂಬರ್ ತಿಂಗಳಲ್ಲಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥನನ್ನು ಎಂಬಾತ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಕುಣಿಗಲ್ ಗಿರಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಗಿರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

     ಈ ಹಿಂದೆ ಸಿಸಿಬಿ ಪೊಲೀಸರು ಕುಣಿಗಲ್ ಗಿರಿಯನ್ನು ಬಂಧಿಸಿದ್ದರು. ಈತನ ವಿರುದ್ಧ ಹಪ್ತಾ ವಸೂಲಿ, ಕೊಲೆ ಯತ್ನ, ದರೋಡೆ ಸೇರಿ ಹಲವು ಪ್ರಕರಣಗಳಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
 

Recent Articles

spot_img

Related Stories

Share via
Copy link
Powered by Social Snap