ತುಮಕೂರು: ಅಂಬೇಡ್ಕರ್‌ ನಿಂದನೆ : ಯುವತಿ ಬಂಧನ

ತುಮಕೂರು: 

     ತುಮಕೂರು ಬಳಿಯ ಕ್ಯಾತಸಂದ್ರ ಸಮೀಪದ ಕಲ್ಲಹಳ್ಳಿ ಗ್ರಾಮದ ನಿವಾಸಿ ವೇದಾವತಿ (22) ನನಗೆ ಅನ್ಯಾಯವಾಗಿದೆ ಎಂದು ಹೇಳುವ ಭರದಲ್ಲಿ ಅಂಬೇಡ್ಕರ್‌ ವಿರುದ್ಧ ನಾಲಿಗೆ ಹರಿಬಿಟ್ಟ ಕಾರಣ ಪೊಲೀಸರು ಬಂಧಿಸಿದ್ದಾರೆ.

     ಇದಕ್ಕೆ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಕಾರಣ ಎನ್ನುತ್ತಾ ಅವಾಚ್ಯ ಶಬ್ದಗಳಿಂದ ಅಂಬೇಡ್ಕರ್​ ಅವರನ್ನು ನಿಂದಿಸಿ, ವಿಡಿಯೋ ಹರಿಬಿಟ್ಟಿದ್ದಳು.

     ವಿಡಿಯೋ ವೈರಲ್​ ಆದ ಬಳಿಕ ವೇದಾವತಿ ವಿರುದ್ಧ ಎನ್.ಇ.ಪಿ.ಎಸ್ ಪೊಲೀಸ್ ಠಾಣೆಗೆ ಶ್ರೀನಿವಾಸ್​ ಎಂಬುವರು ದೂರು ನೀಡಿದ್ದರು. ಇದರ ಆಧಾರದ ಮೇಲೆ ವೇದಾವತಿಯನ್ನು ಬಂಧಿಸಲಾಗಿದೆ. ಪಿಟಿ ಮೇಷ್ಟ್ರು ಮೇಲಿನ ದ್ವೇಷಕ್ಕೆ ಅಂಬೇಡ್ಕರ್​ರನ್ನು ನಿಂದನೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

     9ನೇ ತರಗತಿ ಓದುತ್ತಿದ್ದಾಗ ವೇದಾವತಿ ತನ್ನ ಶಾಲೆಯ ದೈಹಿಕ ಶಿಕ್ಷಕನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ, ದೈಹಿಕ ಶಿಕ್ಷಕ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಈ ಸಂಬಂಧ ವೇದಾವತಿ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ, ನ್ಯಾಯಾಲಯದಲ್ಲಿ ದಾಖಲೆ ಹಾಗೂ ಸಾಕ್ಷಿ ಕೇಳಲಾಗಿತ್ತು.

     ಸಾಕ್ಷಿ ಕೇಳಿದ್ದರಿಂದ ಬೇಸತ್ತ ವೇದಾವತಿ ಸಂವಿಧಾನ ಬರೆದ ಡಾ. ಬಿ.ಆರ್ ಅಂಬೇಡ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ವಿಡಿಯೋ ಹರಿಬಿಟ್ಟಿದ್ದಳು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆದ ಬಳಿಕ ಶ್ರೀನಿವಾಸ್​ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ವೇದಾವತಿಯನ್ನು ಬಂಧಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap