ಮೂಡಿಗೆರೆ:
ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಪರಿಣಾಮ ಶುಕ್ರವಾರ ಕಳಸ ತಾಲೂಕಿನ ಶಾಲೆಗಳಿಗೆ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.ಬೆಳಗ್ಗಿನ ವರೆಗೂ ರಜೆಯ ಯಾವುದೇ ಸೂಚನೆ ಇರದ ಕಾರಣ ಮಕ್ಕಳು ಬೆಳಿಗ್ಗೆ ಶಾಲೆಗಳಿಗೆ ತೆರಳಿದ್ದಾರೆ ಈ ವೇಳೆ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದರಿಂದ ಮಕ್ಕಳು ಶಾಲೆಯಿಂದ ವಾಪಸ್ಸಾಗಿದ್ದಾರೆ. ಗುರುವಾರ ರಾತ್ರಿ ಕಳಸ ತಾಲೂಕಿನಾದ್ಯಂತ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
![](https://prajapragathi.com/wp-content/uploads/2024/06/mudigere.gif)