ಬೆಂಗಳೂರು
ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ 108 ಅಂಬುಲೆನ್ಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರೋಗಿ ಹಾಗೂ ಸಂಬಂಧಿ ಸೇರಿ ಇಬ್ಬರು ಗಾಯಗೊಂಡಿರುವ ದುರ್ಘಟನೆ ನಗರದ ಹೊರವಲಯದ ಆನೇಕಲ್ ತಮಿಳುನಾಡಿನ ಗಡಿಭಾಗದಲ್ಲಿ ನಡೆದಿದೆ.
ಆನೇಕಲ್ನ ಹೋಗನೇಕಲ್ ರಸ್ತೆಯ ಅಡುವೈ ಕುರುಚಿ ಗ್ರಾಮದಿಂದ ಬುಧವಾರ ಬೆಳಿಗ್ಗೆ ರೋಗಿಯನ್ನು ಹೊತ್ತೊಯ್ಯುತ್ತಿದ್ದ 108 ಅಂಬುಲೆನ್ಸ್ ನಲ್ಲಿ ರಸ್ತೆ ಮಧ್ಯೆಯೇ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಚಾಲಕ ವಾಹನ ನಿಲ್ಲಿಸಿ ಕೆಳಗಿಳಿದ ಆತ ವೈದ್ಯಕೀಯ ಸಿಬ್ಬಂದಿಯ ಜೊತೆ ರೋಗಿ ಹಾಗೂ ಆತನ ಸಂಬಂಧಿಯನ್ನು ಇಳಿಸುವಷ್ಟರಲ್ಲಿ ಇವರಿಬ್ಬರಿಗೂ ಸುಟ್ಟ ಗಾಯಗಳಾಗಿದ್ದವು.
ತಕ್ಷಣ ಗಾಯಗೊಂಡ ಇಬ್ಬರನ್ನು ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸಿದ್ದು ಅಷ್ಟರೊಳಗೆ ಅಂಬುಲೆನ್ಸ್ ಸಂಪೂರ್ಣ ಸುಟ್ಟು ಹೋಗಿದೆ ಇಂಜಿನ್ನಲ್ಲಿನ ಶಾರ್ಟ್ ಸಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ