ವಿಮ್ಸ್‍ನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಕಾರ್ಯಾಗಾರ

ಬಳ್ಳಾರಿ

     ಭ್ರಷ್ಟಚಾರ ನಿಗ್ರಹ ದಳದವತಿಯಿಂದ ನಗರದ ವಿಮ್ಸ್ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರರಂದು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

       ಕಾರ್ಯಾಗಾರವನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್‍ಪೆಕ್ಟರ್ ಶ್ರೀಧರ್ ದೊಡ್ಡಿ ಅವರು ಚಾಲನೆ ನೀಡಿ ಮಾತನಾಡಿ, ವೈದ್ಯಕೀಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯ ವೈಖರಿ ಕುರಿತು ಮತ್ತು ಭ್ರಷ್ಟಾಚಾರ ನಿಗ್ರಹದಲ್ಲಿ ಜಾಗೃತ ಪ್ರಜೆಗಳ ಪಾತ್ರ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ತಮ್ಮ ಸಹಕಾರ ಅಗತ್ಯ ಎಂದರು.  ವೀಮ್ಸ್‍ನ ಪ್ರಭಾರಿ ನಿರ್ದೇಶಕರಾದ ನೂರಜಹಾನ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link