ಬೆಂಗಳೂರು
ಹೊಸವರ್ಷದ ಮೊದಲ ದಿನ ಮಂಗಳವಾರ ನಗರ ಸೇರಿ ನಗರದ ಹೊವಲಯದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 10 ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಕಾರು ಡಿಕ್ಕಿ ಮೂವರು ಸಾವು
ನಗರದ ಹೊರವಲಯದ ಹೊಸಕೋಟೆಯ ಮೈಲಾಪುರ ಗೇಟ್ ಬಳಿ ಮಂಗಳರ ರಾತ್ರಿ ವೇಗವಾಗಿ ಹೋಗುತ್ತಿದ್ದ ಟಾಟಾ ಸಫಾರಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಮೂಲದ ಶ್ರೀನಾಥ್, (40 ) ಶ್ರೀಲೇಖಾ (36 ) ಶ್ರೀಲತಾ (32 )ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ,ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿನ ವೈಟ್ ಫೀಲ್ಡ್ ನತ್ತ ಮೃತ ಮೂವರು ಸೇರಿ ಐವರು ಬರುತ್ತಿದ್ದಾಗ ಮೈಲಾಪುರ ಗೇಟ್ ಬಳಿ ರಸ್ತೆ ವಿಭಜಕಕ್ಕೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಅತಿವೇಘ ಚಾಲನೆಯ ಅಪಘಾತಕ್ಕೆ ಕಾರಣವಾಗಿದೆ.ಹೊಸಕೋಟೆ ಪೆಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾಲ್ವರು ಸಾವು
ದೊಡ್ಡಬಳ್ಳಾಪುರದ ಅರಳುಮಲ್ಲಿಗೆ ಗೇಟ್ ವೃತ್ತದಲ್ಲಿ ಮಂಗಳವಾರ ಮುಂಜಾನೆ ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ವಾಪಸ್ ಮನೆಗೆ ಬರುವಾಗ ಬೈಕ್ನಿಂದ ಬಿದ್ದು ಸ್ಥಳದಲ್ಲಿಯೇ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಯನ್ನು ದೊಡ್ಡಬಳ್ಳಾಪುರದ ತೇರಿನ ಬೀದಿಯ ಸಂತೋಷ(18)ಎಂದು ಗುರುತಿಸಲಾಗಿದೆ.ದೊಡ್ಡಬಳ್ಳಾಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮೊದಲನೇ ವರ್ಷದ ಬಿಎ ಓದುತ್ತಿದ್ದ ಸಂತೋಷ್ ಡಿ.31ರ ರಾತ್ರಿ ಹೊಸ ವರ್ಷದ ಪಾರ್ಟಿ ಮುಗಿಸಿ ಮುಂಜಾನೆ 3ರ ವೇಳೆ ಮನೆಗೆ ವಾಪಸ್ಸು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಗೆ ಬಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೃತ ಸಂತೋಷ್ ಹೆತ್ತವರು ಇದೊಂದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಮೃತನ ತಲೆಯ ಮೇಲೆ ಗಂಭೀರವಾದ ಗಾಯವಾಗಿದ್ದು, ಬಿಯರ್ ಬಾಟಲ್ನಿಂದ ಹೊಡೆದಿರಬಹುದು ಎಂಬ ಶಂಕೆಯಿಂದ ನಗರ ಪೆಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.
ಬೈಕ್ ಸವಾರರ ಸಾವು
ದೊಡ್ಡಬಳ್ಳಾಪುರ ಗೌರಿಬಿದನೂರು ರಾಜ್ಯ ಹೆದ್ದಾರಿಯ ಗೊಲ್ಲಹಳ್ಳಿ ಬಳಿ ನಿನ್ನೆ ಮಧ್ಯಾಹ್ನ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕಿಗಳನ್ನು ಹೆಬ್ಬಾಳ ನಿವಾಸಿ ಪ್ರಸಾದ ಮತ್ತು ಮಧ್ಯಪ್ರದೇಶದ ಅಮಿತ್ ಮಿಶ್ರಾ ಎಂದು ಗುರುತಿಸಲಾಗಿದೆ.
ಅಮಿತ್ ಮಿಶ್ರಾ ಬುಲೆಟ್ ಬೈಕ್ನಲ್ಲಿ ಬೆಂಗಳೂರಿನಿಂದ ಹಿಂದೂಪುರಕ್ಕೆ ಹೊರಟ್ಟಿದ್ದರು ಪ್ರಸಾದ್ ಬೈಕ್ನಲ್ಲಿ ಗೌರಿಬಿದನೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು ಅತಿವೇಗವಾಗಿ ಇಬ್ಬರು ಬೈಕ್ಗಳನ್ನ ಚಾಲನೆ ಮಾಡಿದ್ದು, ಮಾಕಳಿ ಸಮೀಪದ ಗೊಲ್ಲಹಳ್ಳಿ ಗ್ರಾಮದ ಬಳಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಸಭಸಕ್ಕೆ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟರೆ ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ಕುರುಬರಕುಂಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಚಂದ್ರಪ್ಪ (55) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪಘಾತಕ್ಕೆ ಖಾಸಗಿ ಬಸ್ನ ಅತಿ ವೇಗವೇ ಕಾರಣ ಅಂತಾ ಹೇಳಲಾಗುತ್ತಿದೆ.
ಯುವಕ ಸಾವು
ದೇವನಹಳ್ಳಿಯಿಂದ ವಿಜಯಪುರಕ್ಕೆ ಹೊರಟ್ಟಿದ್ದ ಖಾಸಗಿ ಬಸ್ ಅತಿ ವೇಗದಿಂದ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ನಿಯಂತ್ರಣ ಕಳೆದುಕೊಂಡ ಬಸ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆ ನಂತರ ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸವಾರ ಸಾವು
ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದು ಬೈಕ್ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟರೆ, ಹಿಂಬದಿ ಸವಾರ ಗಾಯಗೊಂಡಿರುವ ದುರ್ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ದಾಸರಹಳ್ಳಿಯ ಕಿರಣ್ (24)ಎಂದು ಗುರುತಿಸಲಾಗಿದೆ. ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂಬದಿ ಸವಾರ ಮಹಮದ್ ಸಲೀಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ರಾತ್ರಿ 1.15ರ ವೇಳೆ ಬೈಕ್ನಲ್ಲಿ ಸಲೀಂ ಅವರನ್ನು ಹಿಂದೆ ಕೂರಿಸಿಕೊಂಡು ಹೋಗುತ್ತಿದ್ದಾಗ ತುಮಕೂರು -ಬೆಂಗಳೂರು ರಸ್ತೆಯ ಚೊಕ್ಕಸಂದ್ರ ಸಿಗ್ನಲ್ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತವೆಸಗಿದ ಟೆಂಪೋ ಟ್ರಾವೆಲರ್ಗಾಗಿ ಶೋಧ ನಡೆಸಿದ್ದಾರೆ
ಸೆಕ್ಯುರಿಟಿ ಗಾರ್ಡ್ ಸಾವು
ಬೈಕ್ನಲ್ಲಿ ಹೋಗುತ್ತಿದ್ದ ಸೆಕ್ಯುರಿಟಿ ಗಾರ್ಡ್ ಮಹೇಶ್ ಕಬಾಡಿಯಾ (25) ಎಂಬುವರು ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ವೈಟ್ ಫೀಲ್ಡ್ ಮುಖ್ಯರಸ್ತೆಯಲ್ಲಿ ನಡೆದಿದೆ.
ನೇಪಾಳ ಮೂಲದ ಕಬಾಡಿಯಾ ಅವರು ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು,ನಿನ್ನೆ ರಾತ್ರಿ 2ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ಅಪಘಾತವೆಸಗಿದ ಖಾಸಗಿ ಬಸ್ ಚಾಲಕ ವೆಂಕಟೇಶ್ನನ್ನು ಬಂಧಿಸಿರುವ ವೈಟ್ ಫೀಲ್ಡ್ ಸಂಚಾರ ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವ್ಯಕ್ತಿ ಸಾವು ಯಲಹಂಕದ ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ 7ರ ವೇಳೆ ರಸ್ತೆ ದಾಟುತ್ತಿದ್ದ ಕನಕಪುರದ ಶಿವರಾಮಯ್ಯ(60)ಅವರು ಕಾರು ಹರಿದು ಮೃತಪಟ್ಟಿದ್ದಾರೆ.ಶಿವರಾಮಯ್ಯ ಅವರು ಯಲಹಂಕಕ್ಕೆ ಬಂದು ಮಗಳ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ವ್ಯಕ್ತಿ ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚುಂಚನಕಟ್ಟೆ ಮುಖ್ಯರಸ್ತೆಯ 7ನೇ ಕ್ರಾಸ್ನ ವಾಟರ್ ಮ್ಯಾನ್ ಲೋಕೇಶ್ (30) ನೇಣಿಗೆ ಶರಣಾಗಿದ್ದಾರೆ.
ಮನೆಯಲ್ಲಿ ನಿನ್ನೆ ರಾತ್ರಿ ಎಲ್ಲರೂ ಹೊರಹೋಗಿದ್ದಾಗ ಲೋಕೇಶ್ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದು ಲೋಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಕೋಣನಕುಂಟೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
