ಬೆಂಗಳೂರು
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರ ಕಳವು ಮಾಡುತ್ತಿದ್ದ ದುಷ್ಕರ್ಮಿಗಳ ಕಣ್ಣು ಈಗ ಪುರುಷರ ಮೇಲೂ ಬಿದ್ದಿದ್ದು ಅಂಗಡಿಯ ಕಸ ಎಸೆಯಲು ಹೋಗುತ್ತಿದ್ದ ವ್ಯಾಪಾರಿಯೊಬ್ಬರ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಕೃತ್ಯ ಬ್ರಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಬ್ರಮಣ್ಯನಗರದ ವಿವೇಕಾನಂದ ಕಾನೂನು ಕಾಲೇಜಿನ ಬಳಿ ಪೆಟ್ಟಿ ಅಂಗಡಿ ಇಟ್ಟುಕೊಂಡಿದ್ದ ಉಮಾಪತಿ ಎನ್ನುವವರು ಶುಕ್ರವಾರ ಬೆಳಿಗ್ಗೆ 6ರ ವೇಳೆ ಅಂಗಡಿ ಸ್ವಚ್ಛಗೊಳಿಸಿ ಕಸವನ್ನು ಹತ್ತಿರದಲ್ಲಿ ಹಾಕಲು ಹೋಗುತ್ತಿದ್ದರು.ಈ ವೇಳೆ ಹಿಂದಿನಿಂದ ಬಂದ ದುಷ್ಕರ್ಮಿಯೊಬ್ಬ, ಅವರ ಕತ್ತಿನಲ್ಲಿದ್ದ 15 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾನೆ.ಉಮಾಪತಿಯವರು ರಕ್ಷಣೆಗಾಗಿ ಕೂಗಿಕೊಂಡಿದ್ದು, ಸ್ಥಳೀಯರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ದುಷ್ಕರ್ಮಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿರುವ ಸುಬ್ರಮಣ್ಯ ನಗರ ಪೆÇಲೀಸರು, ದುಷ್ಕರ್ಮಿಗಾಗಿ ತೀವ್ರಶೋಧ ನಡೆಸಿದ್ದಾರೆ ಎಂದು ಡಿಸಿಪಿ ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
