4ಲಕ್ಷ ರೂ.ಮೌಲ್ಯದ ಗಾಂಜಾ ವಶ:ಪ್ರಕರಣ ದಾಖಲು

ಬಳ್ಳಾರಿ

    ಅತ್ಯಂತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡವು ಸಿರುಗುಪ್ಪ ತಾಲ್ಲೂಕಿನ ಹಾಳಮುರವಣಿ ಗ್ರಾಮದ ಹೊಲವೊಂದರಲ್ಲಿ ಶುಕ್ರವಾರ ದಾಳಿ ನಡೆಸಿ ಬೆಳೆದಿದ್ದ 4ಲಕ್ಷ ರೂ.ಮೌಲ್ಯದ ಗಾಂಜಾ ಬೆಳೆ ವಶಪಡಿಸಿಕೊಂಡಿದೆ.ಸಾಗುವಳಿ ಮಾಡುತ್ತಿದ್ದ ರೈತನ ಮೇಲೆ ಸಿರಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಹಾಳಮುರವಣಿ ಸೀಮೆಯ ಸರ್ವೆ ನಂ-37/ಬಿ/2ರ ಮಾಲೀಕರಾದ ಕಾಳಪ್ಪ ದೊಡ್ಡ ಈರಣ್ಣ ಅವರು ಸಾಗುವಳಿ ಮಾಡುತ್ತಿರುವ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾಗಳು ಒಟ್ಟು 31.700ಕಿ.ಗ್ರಾಂ (54 ಗಿಡಗಳು) ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ಜಂಟಿ ಆಯುಕ್ತರು(ಜಾ&ತ) ನಿರ್ದೇಶನದ ಮೇರೆಗೆ ಮತ್ತು ಬಳ್ಳಾರಿ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕ ಬಿ.ಹೆಚ್.ಪೂಜಾರ್ ನೇತೃತ್ವದಲ್ಲಿ ಹಾಗೂ ಸಿರಗುಪ್ಪತಹಶೀಲ್ದಾರ ಕೂಡಲಗಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಬಕಾರಿ ನಿರೀಕ್ಷಕರುಗಳಾದ ಬಿ.ಆಂಜನೇಯ, ಪ್ರಹ್ಲಾದ್ ಆಚಾರ್, ಅಬಕಾರಿ ಉಪ ನಿರೀಕ್ಷಕರರಾದ ಶಂಕರ್ ಗುಡದಾರ್ ಹಾಗೂ ಅಬಕಾರಿ ಇಲಾಖೆ ಸಿಬ್ಬಂದಿ ಅತ್ಯಂತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬೆಳೆದಿದ್ದ ಗಾಂಜಾ ಬೆಳೆ ವಶಪಡಿಸಿಕೊಂಡಿದೆ.
ಸಿರಗುಪ್ಪ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link