ಬೆಂಗಳೂರು
ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಕುಸಿತಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಾರಣರಾಗಿದ್ದು ಇದರ ಹೊಣೆಯನ್ನು ಅವರೇ ಹೊರಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ ಸಚಿವ ಸುರೇಶ್ ಕುಮಾರ್ ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿ ಅಭ್ಯರ್ಥಿಗಳ ಜೊತೆಗೆ ವಿದ್ಯಾರ್ಥಿಗಳಿಗೂ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಸುರೇಶ್ ಕುಮಾರ್ ಹೊರಬೇಕು ಎಂದು ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ