ರೇಷನ್ ಕಿಟ್ ವಿತರಣೆ : ಬಿಬಿಎಂಪಿಗೆ ಕ್ಲಾಸ್ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು

    ಬೆಂಗಳೂರು ನಗರದ ಕಂಟೈನ್ಮೆಂಟ್ ವಲಯಗಳಲ್ಲಿನ ಜನರಿಗೆ ರೇಷನ್ ಕಿಟ್ ವಿತರಿಸುವಲ್ಲಿ ವಿಫಲವಾಗಿರುವ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ, ಬಿಬಿಎಂಪಿಗೆ ಸಮರ್ಪಕ ಕಾರ್ಯವಿಧಾನವೇ ತಿಳಿದಿಲ್ಲ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸುಮ್ಮನಿದ್ದೇವೆ ಎಂದಿದೆ.

     ಇನ್ನು ಮುಂದೆ ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯವಿರುವ ಜನರಿಗೆ ಆಹಾರದ ಕಿಟ್ ಪೂರೈಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು. ಇದಕ್ಕಾಗಿ ಪ್ರತ್ಯೇಕ ಅಧಿಕಾರಿ ನೇಮಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ. ಬಿಬಿಎಂಪಿ 25 ಸಾವಿರ ಕಿಟ್ ವಿತರಿಸುವುದಾಗಿ ಹೇಳಿಕೆ ನೀಡಿತ್ತು. ಆದರೆ, ಅಗತ್ಯವಿದ್ದವರನ್ನು ಗುರುತಿಸುವ ಕೆಲಸವನ್ನು ಇನ್ನೂ ಮಾಡಿಲ್ಲ. ಎನ್‍ಜಿಓ ಒಂದು ನೀಡಿದ 900 ಜನರ ಪಟ್ಟಿಯ ಅನುಸಾರ ಮಾತ್ರ ಆಹಾರದ ಕಿಟ್ ಹಂಚಿಕೆ ಮಾಡಿದೆ. ಬಿಬಿಎಂಪಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.ವಿಚಾರಣೆಯನ್ನು ಗುರುವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap