ತಿಪಟೂರು
ಕೊಬ್ಬರಿಗೆ ಬೆಂಬಲ ಶೀಘ್ರವಾಗಿ ಬೆಲೆ ನೀಡದಿದ್ದರೆ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೆನೂರು ಎಂ.ಎನ್.ಕಾಂತರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದಿನ ಸರಕಾರವಿದ್ದಾಗ ಕೊಬ್ಬರಿ ಬೆಲೆ ಕ್ವಿಂಟಾಲ್ಗೆ 14 ರಿಂದ 18 ಸಾವಿರ ರೂ.ಗಳವರೆಗೆ ಇತ್ತು. ಆದರೆ ಈ ಬಾರಿ ಕ್ವಿಂಟಾಲ್ ಕೊಬ್ಬರಿಗೆ 9000 ರೂಪಾಯಿ ಒಳಗೆ ಬಂದು, ರೈತರಿಗೆ ಸಾಕಷ್ಟು ನಷ್ಟವಾಗುತ್ತಿದೆ. ಇದರಿಂದ ಅನ್ನದಾತನ ಪರಿಸ್ಥಿತಿ ತೀರಾ ಕಷ್ಟಕರವಾಗಿದೆ.
ಈಗಾಗಲೆ ಈ ಬಗ್ಗೆ ಮುಖ್ಯಮಂತ್ರಿಗಳಿಗೆ, ಕೃಷಿ ಸಚಿವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ನಫೆಡ್ ಮೂಲಕ ಕೊಬ್ಬರಿ ಖರೀದಿ ಕೇಂದ್ರ ತೆರೆದು ಪ್ರೋತ್ಸಾಹ ಧನ ನೀಡಬೇಕು. ಒಂದು ವೇಳೆ ನಫೆಡ್ ಕೇಂದ್ರ ತೆರೆಯಲು ವಿಳಂಬ ಮಾಡಿದಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಂದಿನ ಹೋರಾಟದ ಬಗ್ಗೆ ರೂಪುರೇಷೇಗಳನ್ನು ಸಿದ್ಧಪಡಿಸಿ, ತಾಲ್ಲೂಕಿನಿಂದ ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/prod-image-500x500-1.gif)