ಮಧುಗಿರಿ
ನಮ್ಮ ಜೀವನದಲ್ಲಿ ವಾಲ್ಮೀಕಿ ರಾಮಾಯಣದ ಅಂಶಗಳನ್ನು ಅಳವಡಿಸಿಕೊಂಡಾಗ ನಮ್ಮ ಜೀವನ ಸನ್ಮಾರ್ಗದಲ್ಲಿ ಸಾಗುತ್ತದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ಅವರು ಬುಧವಾರ ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ಆಡಳಿತ, ಸಮಾಜಕಲ್ಯಾಣ ಇಲಾಖೆ, ತಾಲ್ಲೂಕು ನಾಯಕ ಸಂಘ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ವಾಲ್ಮೀಕಿ ಮರ್ಹಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಜಾತೀಯತೆ ಎಂಬ ಭಾವನೆಯಲ್ಲಿ ಜೀವನ ಸಾಗಿಸುತ್ತಿದ್ದೇವೆ. ಇಂತಹ ಮನೋಭಾವಗಳನ್ನು ತೊರೆದು ನಾವೆಲ್ಲರೂ ಕೂಡ ಒಂದೇ ಎಂಬ ಪ್ರೀತಿ, ವಿಶ್ವಾಸ ಹಾಗೂ ಸಹೋದರತ್ವ ಭಾವದಿಂದ ಜೀವನ ಸಾಗಿಸ ಬೇಕಾಗಿದೆ ಎಂದರು.
ಉಪವಿಭಾಗಾಧಿಕಾರಿ ಎಚ್.ಜಿ. ಚಂದ್ರಶೇಖರ್ ಮಾತನಾಡಿ, ರಾಮಾಯಣ ಕೃತಿಯಲ್ಲಿ ಭಾರತೀಯ ಸಂಸ್ಕøತಿಯ ದಾರಿ ದೀಪವನ್ನು ನೀಡಿದ ಕೀರ್ತಿ ಶ್ರೀ ಮಹರ್ಷಿ ವಾಲ್ಮೀಕಿಯವರದ್ದು ಎಂದರು. ಕಾರ್ಯಕ್ರಮದಲ್ಲಿ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಸಿದ್ದಗಂಗಪ್ಪ, ಮಾಜಿ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ತಿಮ್ಮರಾಯಪ್ಪ ಮಾತನಾಡಿದರು. ಇದೇ ಸಂದರ್ಭದಲ್ಲಿ ಡಾ. ನರಸಿಂಹಮೂರ್ತಿ ಬರೆದ ಕುವೆಂಪು ಕಂಡ ವಾಲ್ಮೀಕಿ ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
