ಬೆಂಗಳೂರು:
ಮುಖ್ಯಮಂತ್ರಿಗಳ ಕನಸಿನ ಕೂಸಾದ ಸಾಲಮನ್ನಾ ಯೋಜನೆ ಲೋಕಸಭೆ ಚುನಾವಣೆಗೆ ಮುನ್ನ ಸಫಲವಾಗುವುದು ಮರಿಚಿಕೆಯಾಗಿದೆ ಎಂದು ಹೇಳಲಾಗಿದೆ.
ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಅವರ ತಂದೆ ಹೆಚ್ ಡಿ ದೇವೇಗೌಡರ ಕನಸು ಈಡೇರುವ ಸಾಧ್ಯತೆ ಕಡಿಮೆಯೆಂದು ರಾಜಕೀಯ ವಿಶ್ಲೀಷಕರು ತಿಳಿಸಿದ್ದಾರೆ.
ರೈತರ ಬೆಳೆ ಸಾಲ ಮನ್ನಾ ಆಗಲು ಕನಿಷ್ಠ 2 ವರ್ಷವಾದರೂ ಬೇಕಾಗಬಹುದು ಎಂದು ನೋಡಲ್ ಅಧಿಕಾರಿಗಳು ಹೇಳುತ್ತಾರೆ . ಬೆಂಗಳೂರು ಗ್ರಾಮೀಣ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ಬೆಳೆ ಸಾಲ ಮನ್ನಾವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, ಈ ವರ್ಷಾಂತ್ಯಕ್ಕೆ ಫಲಾನುಭವಿಗಳೆಲ್ಲರ ಮಾಹಿತಿಯನ್ನು ಸರ್ಕಾರ ಪೂರ್ಣಗೊಳಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳ ಸಮಿತಿ ವರದಿ ನೀಡಿದೆ .
ಈಗಿನ್ನು ಪ್ರಾಯೋಗಿಕ ಬೆಳೆ ಸಾಲ ಮನ್ನಾ ಮಾಡುವ ಯೋಜನೆ ಜಾರಿಗೊಳಿಸಿದ್ದು ಹಂತ ಹಂತವಾಗಿ ನಿಧಾನಗತಿಯಲ್ಲಿ ನಡೆಯುತ್ತಿದೆ ಮತ್ತು ಬ್ಯಾಂಕುಗಳಿಗೆ ಫಲಾನುಭವಿಗಳ ಪರಿಷ್ಕೃತ ವರದಿ ಈ ಡಿಸೆಂಬರ್ 10ಕ್ಕೆ ಕೈಸೇರುವ ನಿರೀಕ್ಷೆಯಿದೇ ಎನ್ನಲಾಗಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/11/farmer-pti-1514364061.gif)