ಖಾಯಂ ನೌಕರರಿಗೆ ಹೆಲ್ತ್ ಕಾರ್ಡ್ ಹಾಗೂ ಇತರೆ ಸೌಲಭ್ಯ ಒದಗಿಸಿಕೊಡಲು ಕ್ರಮ : ಪರಮೇಶ್ವರ

ಬೆಂಗಳೂರು

         ಖಾಯಂ ನೌಕರರಿಗೆ ನೀಡಿರುವ ಹೆಲ್ತ್‍ಕಾರ್ಡ್ ಹಾಗೂ ಇತರೆ ಸರಕಾರಿ ಸೌಲಭ್ಯವನ್ನು ಗುತ್ತಿಗೆ ಪೌರ ಕಾರ್ಮಿಕರಿಗೂ ಒದಗಿಸಿಕೊಡಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ ಅವರು ಭರವಸೆ ನೀಡಿದರು.

       ಸದಾಶಿವನಗರ ಬಿಡಿಎ ಕ್ವಾಟ್ರಸ್‍ನಲ್ಲಿ ಗುತ್ತಿಗೆ ಪೌರ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜೊತೆ ಶುಕ್ರವಾರ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು .ಗುತ್ತಿಗೆ ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಸರಕಾರಿ ರಜೆ ದಿನ ನೀಡುವುದು, ಗರ್ಭಿಣಿ ಯರಿಗೆ ವೇತನ ಸಹಿತ ರಜೆ, 250 ಕಾರ್ಮಿಕರ ಖಾಯಂಗೊಳಿಸುವುದು ಸೇರಿದಂತೆ ಹಲವು ಸಮಸ್ಯೆ ಮುಂದಿಟ್ಟಿದ್ದಾರೆ. ಅದನ್ನು ಪರಿಶೀಲಿಸುವ ಭರವಸೆ ನೀಡಿದ್ದೇನೆ ಎಂದರು.

       ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಹೆಲ್ತ್‍ಕಾರ್ಡ್ ವಿತರಿಸಲುವುದು ಅನಿವಾರ್ಯವಿದ್ದು, ಈ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.ಪೌರಕಾರ್ಮಿಕರ ಹೆಸರಲ್ಲಿ ಸಾಕಷ್ಟು ಸಂಘ ಸಂಸ್ಥೆಗಳು ತಲೆ ಎತ್ತಿವೆ. ಇದರಿಂದ ಬಿಬಿಎಂಪಿ ಆಡಳಿತಕ್ಕೂ ಕಷ್ಟವಾಗಿದೆ. ಹೀಗಾಗಿ ಒಂದೆರಡು ನೋಂದಣಿಯಾಗಿರುವ ಸಂಘಗಳನ್ನಷ್ಟೇ ಗುರುತಿಸಿ, ಪೌರಕಾರ್ಮಿಕರ ಪ್ರತಿ ನಿರ್ಧಾರಕ್ಕು ಗುರುತಿಸಿದ ಒಂದೆರಡು ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link