ಬೆಂಗಳೂರು
ಆಂಬಿಡೆಂಡ್ ಕಂಪನಿ ಡೀಲ್ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಮನೆಗೆ ಮರಳಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತರಿಗೆ ಮನೆಯಲ್ಲಿ ಔತಣಕೂಟ ಏರ್ಪಡಿಸಿದ್ದು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದುಕೊಂಡಿದ್ದಾರೆ..
ಮಾಜಿ ಸಚಿವ ಜನಾರ್ದನ ರೆಡ್ಡಿ ನಗರದಲ್ಲಿನ ಮನೆ ಪಾರಿಜಾತದಲ್ಲಿ ಸಂಭ್ರಮ ಮನೆ ಮಾಡಿದ್ದು ಗುಲ್ಬರ್ಗಾ, ಬಳ್ಳಾರಿ ಮುಂತಾದ ಕಡೆಗಳಿಂದ ಆಪ್ತರು ಬೆಂಬಲಿಗರು ಅಭಿಮಾನಿಗಳು ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಔತಣಕೂಟದ ಹಿನ್ನಲೆಯಲ್ಲಿ ಜನಾರ್ದನ ರೆಡ್ಡಿ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಸಿಬಿಐ ನ್ಯಾಯಾಲಯದಲ್ಲಿ ಹಾಜರಾತಿಯಿಂದ ವಿನಾಯಿತಿ ಪಡೆದ ಜನಾರ್ದನ ರೆಡ್ಡಿ ಪರ ವಕೀಲ ಚಂದ್ರಶೇಖರ್ ಈ ಬಗ್ಗೆ ಮನೆಗೆ ಬಂದು ಮಾಹಿತಿ ನೀಡಿದರು. ಹೀಗಾಗಿ ಕೋರ್ಟ್ಗೆ ಹೋಗುವುದನ್ನು ರದ್ದುಗೊಳಿಸಿದ ರೆಡ್ಡಿ ಔತಣಕೂಟ ಏರ್ಪಡಿಸಿದರು ಎಂದು ತಿಳಿದು ಬಂದಿದೆ.
ಸಿಐಡಿಗೆ ಕೇಸ್
ಈ ನಡುವೆ ಆಂಬಿಡೆಂಟ್ ವಂಚನೆ ಪ್ರಕರಣವನ್ನು ಸಿಐಡಿಗೆ ನೀಡಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ. ಪ್ರಕರಣ ಉನ್ನತ ಅಧಿಕಾರಿಗಳು ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚೆ ಯಾಗಲಿದೆ ವಂಚನೆ ಕೇಸಲ್ಲಿ ಉದ್ಯಮಿಗಳು, ಅಧಿಕಾರಿಗಳು, ಪತ್ರಕರ್ತರು, ಪೆÇಲೀಸ್ ಅಧಿಕಾರಿಗಳ ಹೆಸರು ಕೇಳಿ ಬಂದಿದೆ. ಪ್ರಕರಣದ ವಿಸ್ತೃತ ತನಿಖೆ ಸಲುವಾಗಿ ಇನ್ನೆರಡು ದಿನಗಳಲ್ಲಿ ಸಿಸಿಬಿಯಿಂದ ಸಿಐಡಿಗೆ ಕೇಸ್ ವರ್ಗಾವಣೆಯಾಗುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/11/735493-janardhan-reddy.gif)