ಲಲಿತಾ ಮೇಲೆ ರೌಡಿ ಯಶಸ್ವಿನಿಯಿಂದ ಹಲ್ಲೆ…!

ಬೆಂಗಳೂರು

         ಶ್ರೀರಾಮಸೇನೆಯ ಮಹಿಳಾ ರಾಜ್ಯಾಧ್ಯಕ್ಷೆ ಮಹಿಳಾ ರೌಡಿ ಯಶಸ್ವಿನಿ ಏಳೆಂಟು ಮಂದಿ ಜೊತೆ ಸೇರಿ ಲಲಿತಾ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

         ಹಲೆಯಿಂದ ಗಾಯಗೊಂಡಿರುವ ಲಲಿತಾ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.ಗಂಗಮ್ಮನಗುಡಿ ನೀಲಗಿರಿ ತೊಪ್ಪಿನಲ್ಲಿ ಈ ಘಟನೆ ನಡೆದಿದೆ. ಲಲಿತಾ ಅವರು ದಾರಿಯಲ್ಲಿ ಹೋಗುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿ ಯಶಸ್ವಿನಿ ಹಾಗೂ 8 ಜನ ಮಹಿಳೆಯರು ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಪರಿಣಾಮ ಗಾಯಗೊಂಡಿರುವ ಲಲಿತಾ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

        ಯಶಸ್ವಿನಿ ವಿರುದ್ಧ ಲಲಿತಾ ದೂರು ನೀಡಿದ್ದು, ಗಂಗಮ್ಮನಗುಡಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಶುಕ್ರವಾರ ನ್ಯಾಯಾಲಯದಲ್ಲಿ ತೀರ್ಪು ಬರೋದಿತ್ತು. ನ್ಯಾಯಾಲಯಕ್ಕೆ ಲಲಿತಾ ಹಾಜರಾಗಬಾರದೆಂದು ಲಲಿತಾರ ಮೇಲೆ ಯಶಸ್ವಿನಿ & ಟೀಂ ಹಲ್ಲೆ ನಡೆಸಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link