ಬತ್ತಿದ ಗಂಗಾವಳಿ: ನೀರಿಗಾಗಿ ಜನತೆಯ ಪರದಾಟ

ಅಂಕೋಲಾ:

    ಅಂಕೋಲಾದಲ್ಲಿ ಜನತೆಗೆ ನೀರುಣಿಸುವ ಗಂಗಾವಳಿ ನದಿಯಲ್ಲಿನ ನೀರು ಸಂಪೂರ್ಣ ಬತ್ತಿ ಹೋಗುತ್ತಿದ್ದು ಪುರಸಭಾ ವ್ಯಾಪ್ತಿಯ ಜನತೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀರಿಲ್ಲದೆ ಹಿಂದೆಂದು ಕಂಡರಿಯದ ಭೀಕರ ಬರ ಎದುರಿಸುತ್ತಿರುವ ತಾಲೂಕಿನಲ್ಲೀಗ ನೀರು ಸ್ಥಗಿತ ಮಾಡಿರುವುದರಿಂದ ಜನತೆ ಕಂಗಾಲಾಗಿದ್ದಾರೆ.

    ನಲ್ಲಿ ನೀರಿನ ಸರಬರಾಜು ಸ್ಥಗಿತ ಮಾಡಿರುವುದನ್ನು ಪುರಸಭೆಯ ಎಲ್ಲಾ ವಾರ್ಡ್‌ಗಳಲ್ಲಿಯೂ ಧ್ವನಿ ವರ್ಧಕದ ಮೂಲಕ ಹೇಳಲಾಗುತ್ತಿದೆ. ಈ ವಾರ್ಡ್‌ಗಳಿಗೆ ಇಂದಿನಿಂದ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ನಿಂದ ಸರಬರಾಜು ಮಾಡುವ ನೀರು ಜನರಿಗೆ ಅಗತ್ಯಕ್ಕೆ ತಕ್ಕಷ್ಟು ಪೂರೈಸಲು ಸಾಧ್ಯವಾಗುತ್ತಿಲ್ಲ.

   ಗಂಗಾವಳಿ ನದಿಯಿಂದ ಪ್ರತಿನಿತ್ಯ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಿಗೆ 20 ಲಕ್ಷ ಲೀಟರ್ ಗೂ ಅಧಿಕ ನೀರು ಬೇಕಿತ್ತು. ಆದರೆ ಗಂಗಾವಳಿ ನದಿಯಲ್ಲಿ ನೀರುಅಲ್ಪ ಪ್ರಮಾಣದಲ್ಲಿ ಬತ್ತಿರುವುದರಿಂದ ಮುಂದಿನ ದಿನದಲ್ಲಿ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap