ಉಪಸಮರದಲ್ಲೂ ಮೈತ್ರಿ ಮುಂದುವರಿಕೆ

ಬೆಂಗಳೂರು

         ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಎಡಪಕ್ಷಗಳು ಬೆಂಬಲ ನೀಡಿವೆ.

       ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಡ ಪಕ್ಷಗಳ ಮುಖಂಡರು ಜಾತ್ಯಾತೀತ ನಿಲುವನ್ನು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲನೀಡುವುದಾಗಿ ತಿಳಿಸಿದರು.

       ರಾಜ್ಯಾದ್ಯಂತ ತನ್ನದೇ ಆದ ಕಾರ್ಯಕರ್ತರ ಪಡೆ ಹೊಂದಿರುವ ಎಡಪಕ್ಷಗಳು. ಚುನಾವಣಾ ಪ್ರಚಾರದಲ್ಲೂ ಭಾಗಿಯಾಗುವುದಾಗಿ ಎಐಟಿಯುಸಿನ ಅನಂತ ಸುಬ್ಬರಾವ್, ಸಿಪಿಐ ರಾಜ್ಯ ಕಾರ್ಯದರ್ಶಿ ಪಿ.ವಿ ಲೋಕೇಶ್ ಹಾಗೂ ಮತ್ತಿತರ ಮುಖಂಡರು ತಿಳಿಸಿದ್ದಾರೆ . ಕೋಮುವಾದಿ ಪಕ್ಷವನ್ನು ದೂರ ಇಡಬೇಕು. ಆ ಮೂಲಕ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಒಟ್ಟುಗೂಡಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯಲು ಯತ್ನಿಸುತ್ತಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಬುದ್ಧಿ ಕಲಿಸುವ ಸಲುವಾಗಿ ಬೆಂಬಲ ನೀಡುತ್ತಿರುವುದಾಗಿ ಎಡರಂಗದ ಮುಖಂಡರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap