ಹೊನ್ನಾಳಿ:
ಆಯುರ್ವೇದ ಚಿಕಿತ್ಸಾ ಪದ್ಧತಿಯಿಂದ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯ ಎಂದು ಫಲವನಹಳ್ಳಿ ಗ್ರಾಮದ ಆಯುಷ್ ವೈದ್ಯಾಧಿಕಾರಿ ಡಾ. ಲಿಂಗರಾಜ್ ಹೇಳಿದರು.
ಗಂಜೀನಹಳ್ಳಿ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಆಯುಷ್ ಇಲಾಖೆಯ ವತಿಯಿಂದ ಹಮ್ಮಿಕೊಂಡ “ಆಯುಷ್ ಮನೆ ಮದ್ದು ಕಾರ್ಯಕ್ರಮ”ದಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಬಗ್ಗೆ ಜನರಿಗೆ ಮಾಹಿತಿ ನೀಡಿ ಅವರು ಮಾತನಾಡಿದರು.
ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಮೊದಲು ರೋಗದ ಮೂಲವನ್ನು ಪತ್ತೆ ಮಾಡಲಾಗುತ್ತದೆ. ಆ ಬಳಿಕ ರೋಗಕ್ಕೆ ಚಿಕಿತ್ಸೆ ಪ್ರಾರಂಭಿಸಲಾಗುತ್ತದೆ. ಈ ಕಾರಣಕ್ಕಾಗಿ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ರೋಗ ವಾಸಿಯಾಗಲು ಹೆಚ್ಚಿನ ಸಮಯ ಬೇಕಾಗುತ್ತದೆ. ಹಾಗಾಗಿ, ಈ ಪದ್ಧತಿಯಲ್ಲಿ ಚಿಕಿತ್ಸೆ ಪಡೆಯಲು ಜನರಿಗೆ ತಾಳ್ಮೆ ಅಗತ್ಯ ಎಂದು ತಿಳಿಸಿದರು.
ಡಾ. ರವಿರಾಜ್, ಡಾ. ಸಾಲಿಮಠ್, ಡಾ. ಯಶವಂತ್, ಡಾ. ಗೀತಾ, ಗಂಜೀನಹಳ್ಳಿ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಶಿಧರಮೂರ್ತಿ, ಫಲವನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಮ್ಮ ಚಂದ್ರಪ್ಪ, ಸದಸ್ಯೆಯರಾದ ರಜನಿ ರಮೇಶ್, ಗಂಗಮ್ಮ ರಂಗಪ್ಪ, ಅಂಗವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
