ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೇದೆ ಸಾವು

ಕುಣಿಗಲ್

         ಅಮೃತೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆ ಆಗಿ ಕೆಲಸ ನಿರ್ವಹಿಸುತ್ತಿದ್ದ ಪ್ರದೀಪ್ ಕಲ್ಲಪ್ಪ ಪÀಡಲಾಳೆ ಮಂಗಳವಾರ ಬೆಳಿಗ್ಗೆ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ.

        ಪ್ರದೀಪ್‍ರವರು ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗ ಗ್ರಾಮದವರಾಗಿದ್ದು 2016ರರಲ್ಲಿ ಪೊಲೀಸ್ ಇಲಾಖೆಯ ಕೆಲಸಕ್ಕೆ ಸೇರಿದ್ದು 23-10-2017 ರಿಂದ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಡಿಯೂರು ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬ್ಲಡ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದು ಸೆ.19 ರಿಂದ ರಜೆ ಮೇಲೆ ತೆರಳಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆಂದು ಅಮೃತೂರು ಪೊಲೀಸ್ ಠಾಣಾ ಸಿಬ್ಬಂದಿ ತಿಳಿಸಿದ್ದಾರೆ. ಕುಣಿಗಲ್ ಉಪವಿಭಾಗದ ಡಿವೈಎಸ್ಪಿ ರಾಮಲಿಂಗೇಗೌಡ, ಸರ್ಕಲ್ ಇನ್ಸ್‍ಪೆಕ್ಟರ್ ಅಶೋಕ್ ಕುಮಾರ್ ಹಾಗೂ ಅಮೃತೂರು ಪೊಲೀಸ್ ಠಾಣೆಯ ಪಿಎಸ್‍ಐ ಅನಿಲ್ ಕುಮಾರ್ ಮತ್ತು ಸಿಬ್ಬಂದಿ ಮೃತರಿಗೆ ಸಂತಪ ಸೂಚಿಸಿದ್ದಾರೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link