ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸಾಣೇಹಳ್ಳಿಶ್ರೀ

ದಾವಣಗೆರೆ:

         ತಮಕೂರಿನ ಸಿದ್ದಗಂಗಾ ಮಠಕ್ಕೆ ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಭೇಟಿ ನೀ, ಶ್ರೀಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.

            ಶ್ರೀಶಿವಕುಮಾರ ಸ್ವಾಮೀಜಿಯವರು ಅತ್ಯಂತ ಲವಲವಿಕೆಯಿಂದ ಇದ್ದು, ಆರೋಗ್ಯ ಸ್ಥಿರವಾಗಿದ್ದು ನಮ್ಮನ್ನು ನೋಡಿದಾಗ ಗುರುತಿಸಿ ಸ್ಪಂದಿಸಿದರು. ವಯೋಸಹಜಕ್ಕೆ ಅನುಗುಣವಾಗಿ ದೇಹ ಕೃಷವಾಗಿದೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದರು. ನಂತರ ಕಿರಿಯ ಸ್ವಾಮೀಜಿಗಳನ್ನು ಭೇಟಿಮಾಡಿ ಪರಸ್ಪರ ಭಕ್ತಿಸಮರ್ಪಣೆ ಸಲ್ಲಿಸಿದರು.

          ಈ ಸಂದರ್ಭದಲ್ಲಿ ವಿಶ್ರಾಂತ ಪ್ರಾಚಾರ್ಯ ನಾ. ಲೋಕೇಶ್ ಒಡೆಯರ್, ಸಾಣೇಹಳ್ಳಿಯ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷ ಎ.ಸಿ.ಚಂದ್ರಣ್ಣ, ಅಧ್ಯಾಪಕ ಹೆಚ್.ಎಸ್.ದ್ಯಾಮೇಶ್, ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಆನಂದ ಮತ್ತಿತರರು ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link