ವಿದ್ಯಾರ್ಥಿಗಳಿಂದ ಪತ್ರ ಬರೆಸುವ ಮೂಲಕ ಮತಜಾಗೃತಿ ಕಾರ್ಯಕ್ರಮ

ದಾವಣಗೆರೆ

         ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ(ಗ್ರೇಡ್-2) ಮಂಜುಳಮ್ಮ ಹರಿಹರ ಇವರ ನೇತೃತ್ವದಲ್ಲಿ ಮತದಾನ ಮಹತ್ವದ ಬಗ್ಗೆ ಅರಿವು ಹಾಗೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಪತ್ರ ಬರೆಯಿಸಿ ಜಾಗೃತಿ ಮೂಡಿಸಲಾಯಿತು.

       ಈ ವೇಳೆ ನಿಲಯದ ವಾರ್ಡನ್ ಮಾರುತಿ, ನಿಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಿವಾನಂದ ಕುಂಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap