ಜೆಡಿಎಸ್ ಬಗ್ಗೆ ಕಾಂಗ್ರೆಸ್‍ ಅಪಪ್ರಚಾರ ಮಾಡುತ್ತಿದೆ : ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು

    ಕಾಂಗ್ರೆಸ್‍ ನವರ ಒಳ ಸಂಚಿನಿಂದ ರಾಜ್ಯದಲ್ಲಿ ಬಿಜೆಪಿ ಮತ್ತೆಅಧಿಕಾರಕ್ಕೆ ಬಂದಿದೆಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಶಿವಾಜಿನಗರದಲ್ಲಿ ಜೆಡಿಎಸ್‍ ಅಭ್ಯರ್ಥಿ ತನ್ವೀರ್‍ ಅಹಮ್ಮದ್‍ ಉಲ್ಲಾ ಪರವಾಗಿ ರೋಡ್‍ಶೋ ನಡೆಸಿದ ಅವರು, ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

     ಜೆಡಿಎಸ್ ಬಗ್ಗೆ ಕಾಂಗ್ರೆಸ್‍ ಅಪಪ್ರಚಾರ ಮಾಡುತ್ತಿದೆ. ಜೆಡಿಎಸ್‍ನ್ನು ಬಿಜೆಪಿಯ ಬಿ ಟೀಮ್‍ಎಂದು ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು. ಬಡವರು ಕಳೆದುಕೊಂಡಿರುವ ಹಣವನ್ನು ಹಿಂದಿರುಗಿಸಲು ನಾನು ಕ್ರಮಕೈಗೊಂಡಿದ್ದೆ. ಬಡವರಿಗೆ ಅವರ ಹಣ ಅವರಿಗೆ ತಲುಪವವರೆಗೂ ಜನರೊಂದಿಗೆ ಇರುತ್ತೇನೆ ಎಂದು ಪರೋಕ್ಷವಾಗಿ ಅಧಿಕ ಬಡ್ಡಿ ಆಸೆ ತೋರಿಸಿ ಜನರಿಗೆ ವಂಚಿಸುತ್ತಿರುವ ಸಂಸ್ಥೆಗಳನ್ನು ಉದ್ದೇಶಿಸಿ ಹೇಳಿದರು.ನಿಮ್ಮನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದ್ದು ನಮಗೆ ಶಕ್ತಿ ನೀಡಿಎಂದು ಪ್ರಚಾರದ ವೇಳೆ ಜನತೆಯಲ್ಲಿ ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap