ಬೆಂಗಳೂರು:
ಸಚಿವ ಸಂಪುಟ ವಿಸ್ತರಣೆ ಆದ ಬಳಿಕ ಅತೃಪ್ತರಾಗಿ ಗುರುತಿಸಿಕೊಮಡಿದ್ದ ಹೊಂದಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಯವರನ್ನು ಸಮಾಧಾನ ಪಡಿಸಲುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳುವ ಕಾಂಗ್ರೇಸ್ ನವರು ಬೆಳಗಾವಿ ಬ್ರದರ್ಸ್ ಗಳನ್ನು ಹಿಡಿಯುವಲ್ಲಿ ವಿಫಲವಾಗಿದ್ದಾರೆ .
ಕೆಲ ನಾಯಕರು ಉದ್ದೇಶಪೂರ್ವಕವಾಗಿಯೇ ಹೈಕಮಾಂಡ್’ಗೆ ತಪ್ಪು ಮಾಹಿತಿ ನೀಡಿ ತಮಗೆ ಸಚಿವ ಸ್ಥಾನ ತಪ್ಪಿಸಿದ್ದಾರೆಂದು ಅಸಮಾಧಾನಗೊಂಡಿದ್ದ ರಾಮಲಿಂಗಾ ರೆಡ್ಡಿಯವರೊಂದಿಗೆ ನಿನ್ನೆಯಷ್ಟೇ ಮಾತುಕತೆ ನಡೆಸಿದ್ದ ಸಿದ್ದರಾಮಯ್ಯ ಅವರು, ಕೆಲ ಅನಿವಾರ್ಯ ಕಾರಣಗಳಿಂದ ಹಿರಿಯರಾಗಿದ್ದರೂ ನಿಮಗೆ ಸಚಿವ ಸ್ಥಾನ ತಪ್ಪಿದೆ. ಆಧರೆ, ಒಳ್ಳೆಯ ಕಾಲ ಬರುತ್ತದೆ. ಸ್ವಲ್ಪ ತಾಳ್ಮೆ ವಹಿಸಿ, ಈಗ ನಾನು ಅಧಿಕಾರ ಇಲ್ಲದೇ ಕಾಯುತ್ತಿಲ್ಲವೇ? ಅದೇ ರೀತಿ ನೀವು ತಾಳ್ಮೆ ವಹಿಸಿ, ಖಂಡಿತವಾಗಿಯೂ ಉತ್ತಮ ಅವಕಾಶ ಬರುತ್ತದೆ ಎಂದು ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿಯವರು ತಾಳ್ಮೆ ವಹಿಸಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.ಆದರೆ ಜಾರಕಿಹೊಳಿ ಮಾತ್ರ ಇಲ್ಲಿಯವರೆಗೂ ಯಾರೊಬ್ಬರ ಕೈಗೂ ಸಿಕ್ಕಿಲ್ಲ ಎಂದು ಎಲ್ಲರೂ ತಲೆ ಕೆಡಿಸಿ ಕೊಂಡಿದ್ದಾರೆ .