ದಾವಣಗೆರೆ:
ಜಿಲ್ಲಾ ಪಂಚಾಯತ್ ಸಿಇಒ ಅಶ್ವತಿ ಹಾಗೂ ಉಪ ಕಾರ್ಯದರ್ಶಿ ಜಿ.ಎಸ್.ಷಡಾಕ್ಷರಪ್ಪನವರ ವಿರುದ್ಧ ಜಿ.ಪಂ. ಅಧ್ಯಕ್ಷೆ ಕೆ.ಆರ್.ಜಯಶೀಲಾರವರು ಎಸಿಬಿಗೆ ನೀಡಿರುವ ದೂರು ಹಾಗೂ ಇದಕ್ಕೆ ಪಕ್ಷದ ಜಿ.ಪಂ. ಸದಸ್ಯರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಇಂದು (ಡಿ.22ರಂದು) ಪಕ್ಷದ ಜಿಲ್ಲಾ ಕೋರ್ ಕಮಿಟಿ ಹಾಗೂ ಜಿ.ಪಂ.ಸದಸ್ಯರ ಸಭೆ ಕರೆದು ಚರ್ಚಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಪಂ. ಅಧ್ಯಕ್ಷೆ ದೂರು ನೀಡುವ ಬಗ್ಗೆ ತಮ್ಮನ್ನೂ ಸೇರಿದಂತೆ ಪಕ್ಷದ ಇತರೆ ಯಾವ ಮುಖಂಡರೊಂದಿಗೆ ಚರ್ಚಿಸಿಲ್ಲ. ಪಕ್ಷದ ಮುಖಂಡರ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಪಡೆದು ದೂರು ನೀಡಿದ್ದರೆ ಸೂಕ್ತವಾಗಿತ್ತು. ಜಯಶೀಲಾ ಅವರು ದೂರು ನೀಡಿರುವ ಅಂಶಗಳ ಬಗ್ಗೆ ತಮಗೆ ಇನ್ನೂ ಮಾಹಿತಿ ಇಲ್ಲ. ಇಂದು ಪಕ್ಷದ ಶಾಸಕರು, ಕೋರ್ ಕಮಿಟಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸಣೆ ನಡೆಸಿ, ಮುಂದಿನ ನಿರ್ಧಾರ ಏನೆಂಬುದರ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮಾಡಿದ ಆರೋಪ, ನೀಡಿದ ದೂರಿನ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಹಾಗೂ ಜಿ.ಪಂ. ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಲು ಕಾರಣವೇನು? ಎಂಬುದರ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರಾಜಶೇಖರ್, ಬಿ.ರಮೇಶ್ ನಾಯ್ಕ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/21_dvg_05_2.jpg)